Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...