Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...