Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...