Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...