Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....