Homeಮುಖಪುಟತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

ತೆಲಂಗಾಣ: ‘ಜೈ ಶ್ರೀರಾಮ್’ ಕೂಗುವಂತೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಘಟನೆಯಲ್ಲಿ ಸಿಲುಕಿದ ಮಹಿಳೆಗೆ ಗರ್ಭಪಾತ

- Advertisement -
- Advertisement -

‘ಜೈ ಶ್ರೀ ರಾಮ್’ ಎಂದು ಕೂಗುತ್ತಾ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ವ್ಯಕ್ತಿಯನ್ನು ಬರ್ಬರವಾಗಿ ಥಳಿಸಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ನರಸಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಥಳಿತಕ್ಕೊಳಗಾದ ವ್ಯಕ್ತಿಯನ್ನು ಇಮ್ರಾನ್ ಅಹ್ಮದ್ ಎಂದು ಗುರುತಿಸಲಾಗಿದೆ. ಇಡೀ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಎಲ್‌ಪಿಜಿ ಸಿಲಿಂಡರ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುವ ಲಿಂಗಂ ಎಂಬವರೊಂದಿಗೆ ಇಮ್ರಾನ್ ಜಗಳವಾಡಿದ ಬಳಿಕ ಈ ಬೆಳವಣಿಗೆಯಾಗಿದೆ. ಇಬ್ಬರ ನಡುವೆ ವಾಗ್ವಾದ ಶುರುವಾದ ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಈ ಘಟನೆಯು ಮೇ 7 ರಂದು ನಡೆದಿದೆ ಎಂದು ವರದಿಯಾಗಿದೆ ಮತ್ತು ಅದರ ವೀಡಿಯೊ ಇತ್ತೀಚೆಗೆ ವೈರಲ್ ಆಗಿದೆ.

“ಲಿಂಗಂ ಅವರು ತುಂಬಿದ ಎಲ್ಪಿಜಿ ಸಿಲಿಂಡರ್ ಅನ್ನು ಪೂರೈಸಲು ಇಮ್ರಾನ್ ಅವರ ನಿವಾಸಕ್ಕೆ ಹೋಗಿದ್ದರು. ಸಿಲಿಂಡರ್ ವಿತರಿಸುವಾಗ ಲಿಂಗಂ ಖಾಲಿ ಸಿಲಿಂಡರ್ ಕೇಳಿದ್ದು, ಇಮ್ರಾನ್ ಕುಟುಂಬ ನಿರಾಕರಿಸಿದೆ. ನಾಳೆ ಕೊಡುವುದಾಗಿ ತಿಳಿಸಿದ್ದು, ಆ ಬಳಿಕ ವಾಗ್ವಾದವಾಗಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇಬ್ಬರ ನಡುವೆ ಜಗಳವಾಯಿತು. ಹನುಮ ಮಾಲೆ ಧರಿಸಿದ್ದ ಲಿಂಗಂ ಅವರಿಗೆ ಇಮ್ರಾನ್‌ ಹೊಡೆದಿದ್ದಾರೆಂದು ಹೇಳಲಾಗುತ್ತಿದೆ. ಬಳಿಕ ಲಿಂಗಂ ಇಲ್ಲಿಂದ ತೆರಳಿದರು. ನಂತರ ಬಂದ ಕೇಸರಿ ವಸ್ತ್ರಧಾರಿಗಳು ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದು ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ್ದಾರೆ. ಸುತ್ತುವರಿದು ‘ಜೈ ಶ್ರೀರಾಮ್‌’ ಎನ್ನುತ್ತಾ ಇಮ್ರಾನ್ ಅವರ ವಸ್ತ್ರ ಕಳಚುವ ದುಷ್ಕೃತ್ಯಕ್ಕೂ ಕೈ ಹಾಕಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಇಮ್ರಾನ್ ಕೋಪದ ಭರದಲ್ಲಿ ತನ್ನ ಪಾದರಕ್ಷೆಯಿಂದ ಲಿಂಗಮ್‌ಗೆ ಕಪಾಳಕ್ಕೆ ಹೊಡೆದಿದ್ದಾರೆ. ಇದರಿಂದ ಅಸಮಾಧಾನಗೊಂಡ ಲಿಂಗಂ ಸಮೀಪದ ದೇವಸ್ಥಾನದಲ್ಲಿ ಹನುಮ ಮಾಲೆ ಕಾರ್ಯಕ್ರಮದಲ್ಲಿದ್ದ ಇತರರಿಗೆ ದೂರು ನೀಡಿದರು. ಇಮ್ರಾನ್‌ ಮನೆಗೆ ಬಂದ ಗುಂಪು ಇಮ್ರಾನ್‌ ಅವರ ತಾಯಿಯ ಮನವಿಯನ್ನು ನಿರ್ಲಕ್ಷಿಸಿ, ಇಮ್ರಾನ್‌ ಅವರನ್ನು ಮನೆಯಿಂದ ಹೊರಗೆ ಎಳೆದೊಯ್ದು ರಸ್ತೆಯಲ್ಲಿ ಥಳಿಸಿದೆ” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

“ಸುಮಾರು 10-15 ಜನರು ಸುತ್ತುವರಿದಿದ್ದರು. ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಲು ಆರಂಭಿಸಿದರು. ಇಮ್ರಾನ್ ಅವರ ತಾಯಿ ಮತ್ತು ಗರ್ಭಿಣಿ ಸಹೋದರಿ ಮಧ್ಯದಲ್ಲಿ ಸಿಕ್ಕಿಬಿದ್ದರು. ಜಗಳದ ಬಗ್ಗೆ ಮಾಹಿತಿ ಪಡೆದ ನಾವು 10-15 ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದೆವು. ಇಮ್ರಾನ್ ಮತ್ತು ಇತರರನ್ನು ಕಸ್ಟಡಿಗೆ ತೆಗೆದುಕೊಂಡೆವು” ಎಂದು ಸಿಐ ಮಝರ್ ಮಾಹಿತಿ ನೀಡಿದ್ದಾರೆ.

“ನರಸಾಪುರ ಪೊಲೀಸರು ಇಮ್ರಾನ್ ವಿರುದ್ಧ ಸೆಕ್ಷನ್ 295 (ಧರ್ಮಕ್ಕೆ ಅವಮಾನ) ಮತ್ತು ಹಲ್ಲೆ ನಡೆಸಿದ ಗುಂಪಿನ 10-15 ಜನರ ವಿರುದ್ಧ ಸೆಕ್ಷನ್ 341 (ತಪ್ಪು ಸಂಯಮ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 506 (ಘೋರವಾದ ಗಾಯವನ್ನು ಉಂಟುಮಾಡುವ ಬೆದರಿಕೆ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.”

ಇದು ಧಾರ್ಮಿಕ ವಿಷಯವಾಗಿ ಪರಿಣಮಿಸುತ್ತದೆ ಎಂಬ ಆಧಾರದ ಮೇಲೆ ಪೊಲೀಸರು ಇಮ್ರಾನ್‌ನನ್ನು ಮಾತ್ರ ಬಂಧಿಸಿದರು. ಅವರನ್ನು ಕಸ್ಟಡಿಗೆ ತೆಗೆದುಕೊಂಡರು. ಉಳಿದವರೆಲ್ಲರಿಗೂ ನೋಟಿಸ್ ಜಾರಿ ಮಾಡಿ ಬಿಟ್ಟು ಕಳುಹಿಸಿದರು ಎಂದು ‘ಕ್ವಿಂಟ್‌’ ವರದಿ ಮಾಡಿದೆ.

ಇಮ್ರಾನ್ ಸಹೋದರಿಗೆ ಗರ್ಭಪಾತ

ಇಮ್ರಾನ್ ಅವರನ್ನು ಬಲ ಪಂಥೀಯ ಗುಂಪು ಥಳಿಸುತ್ತಿದ್ದಾಗ ಇಮ್ರಾನ್ ಅವರ ಗರ್ಭಿಣಿ ಸಹೋದರಿ ಆಯೇಷಾ ಕೂಡ ಮಧ್ಯಪ್ರವೇಶಿಸಿದ್ದಾರೆ. ತುಂಬು ಗರ್ಭಿಯನ್ನೂ ದುಷ್ಕರ್ಮಿಗಳು ತಳ್ಳಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಘಟನೆಯಿಂದಾಗಿ ಇಮ್ರಾನ್‌ ಸಹೋದರಿಗೆ ಗರ್ಭಪಾತವಾಗಿದೆ. ಹಸುಗೂಸು ತೀರಿ ಹೋಗಿದೆ ಎಂದು ವರದಿಯಾಗಿದೆ. ಅವರು ಹೈದರಾಬಾದ್‌ನ ನಿಲೋಫರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಗು ಬ್ರೇನ್‌ ಡೆಡ್‌ನಿಂದ ಸತ್ತಿದೆ ಎಂದು ಹೇಳಲಾಗುತ್ತಿದೆ. ನಿಖರ ಕಾರಣ ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ನ್ಯಾಯಾಂಗ ನಿಂದನೆ; ದೆಹಲಿ ಹೈಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ಇಮ್ರಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನರಸಾಪುರ ಪೊಲೀಸ್ ಠಾಣೆಯ ಹೊರಗೆ ಬಲಪಂಥೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆಯೂ ವರದಿಯಾಗಿದೆ.

“ಲಿಂಗಮ್ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಪೊಲೀಸರು ಇದೀಗ ಇಮ್ರಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಮ್ರಾನ್ ಮೇಲೆ ಹಲ್ಲೆ ನಡೆಸಿದ ಬಲಪಂಥೀಯ ಕಾರ್ಯಕರ್ತರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡೂ ಕಡೆಯವರ ಮೇಲೆ ಕ್ರಮ ಕೈಗೊಳ್ಳಲಾಗಿದೆ” ಎಂದು ಡಿಎಸ್ಪಿ ತೂಪ್ರಾನ್ ಹೇಳಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ತೆಲಂಗಾಣದ ಮುಸ್ಲಿಂ ರಾಜಕೀಯ ಪಕ್ಷವಾದ ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ಅಧ್ಯಕ್ಷ ಅಮ್ಜೆದ್ ಉಲ್ಲಾ ಖಾನ್, “ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ವ್ಯಕ್ತಿಗಳನ್ನು ಬಂಧಿಸಬೇಕು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....