Homeಮುಖಪುಟಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

- Advertisement -
- Advertisement -

ಕೇಸರಿ ಧ್ವಜವನ್ನು ಅವಮಾನಿಸಿದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿ ಆತನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಅಮಾನವೀಯ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಮುಸ್ಲಿಂ ಯುವಕ ಕೇಸರಿ ಧ್ವಜವನ್ನು ಅವನ ಪ್ಯಾಂಟ್‌ನೊಳಗೆ ತುರುಕಿಸಿಕೊಳ್ಳುವ ವಿಡಿಯೋ ರೀಲ್ಸ್‌ ವೈರಲ್‌ ಆಗಿತ್ತು. ರೀಲ್ಸ್‌ನಿಂದ ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕನನ್ನು ಥಳಿಸಿದ್ದಾರೆ.

ವೈರಲ್‌ ಆಗಿರುವ ಕೆಲವು ವೀಡಿಯೋಗಳಲ್ಲಿ ದುಷ್ಕರ್ಮಿಗಳ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸುತ್ತಿರುವುದು ಮತ್ತು ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ.

ಇದಲ್ಲದೆ ಥಳಿತಕ್ಕೊಳಗಾಗಿರುವ ಸಂತ್ರಸ್ತ ಯುವಕನ ವಿರುದ್ಧ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 153(ಎ), 295-ಎ, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸಂತ್ರಸ್ತ ಮುಸ್ಲಿಂ ಯುವಕ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 323, 505(2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ತನಿಖೆಯನ್ನು ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಲಿತ ವಿದ್ಯಾರ್ಥಿಗೆ ‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಹಲ್ಲೆ

ಬೀದರ್‌ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗೆ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬೀದರ್‌ನ ಹುಮನಾಬಾದ್ ಪೊಲೀಸರು ಮಂಗಳವಾರ ಬಂಧಿಸಿದ್ದರು.

ಹುಮನಾಬಾದ್‌ ತಾಲೂಕಿನ ಹಣಸಗೇರಾ ಗ್ರಾಮದ ದ್ವಿತೀಯ ಪಿಯು ಓದುತ್ತಿರುವ ವಿದ್ಯಾರ್ಥಿ ದರ್ಶನ್ ಲಕ್ಷ್ಮಣ ಕಟ್ಟಿಮನಿ ನೀಡಿದ ದೂರು ಆಧರಿಸಿ ಅಭಿಷೇಕ್, ರಿತೇಶ್ ರೆಡ್ಡಿ, ಸುನಿಲ್ ರೆಡ್ಡಿ ಮತ್ತು ಅಭಿಷೇಕ್ ತೆಲಂಗ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಹಲ್ಲೆಗೊಳಗಾದ ವಿದ್ಯಾರ್ಥಿ ದರ್ಶನ್ ಜನವರಿ 22 ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ದಿನ “ನೀನೇ ದೇವಾ ನೀನೇ ಎಲ್ಲಾ, ಇವನಲ್ಲಾ ಗುರು ಅವನು, ನಾವೆಲ್ಲ ಅವರ ಅಭಿಮಾನಿಗಳು” ಎಂದು ಡಾ.ಬಿ.ಆರ್.‌ಅಂಬೇಡ್ಕರ್‌, ರಾಮ ಮತ್ತು ಹನುಮಂತನ ಪೊಟೋ ಇರುವ ವಿಡಿಯೋ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ಗಮನಿಸಿದ ನಾಲ್ವರು ದರ್ಶನ್‌ನನ್ನು ಆಟೋದಲ್ಲಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು‌, ಜೈ ಶ್ರೀರಾಮ್ ಎಂದು ಹೇಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನು ಓದಿ: ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣಕನ್ನಡ ಜಿಲ್ಲೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...