Homeದಲಿತ್ ಫೈಲ್ಸ್ತೆಲಂಗಾಣ | ಲಗಚರ್ಲಾ ಪೊಲೀಸ್ ದೌರ್ಜನ್ಯ ಪ್ರಕರಣ : ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ತೆಲಂಗಾಣ | ಲಗಚರ್ಲಾ ಪೊಲೀಸ್ ದೌರ್ಜನ್ಯ ಪ್ರಕರಣ : ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

- Advertisement -
- Advertisement -

ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಲಗಚರ್ಲಾ ಗ್ರಾಮದ ಬುಡಕಟ್ಟು ಜನರ ಮನೆಗಳಿಗೆ ತಡರಾತ್ರಿ ನುಗ್ಗಿದ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿ ಕೇಳಿದೆ.

ತೆಲಂಗಾಣದ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ಎರಡು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ಎನ್‌ಹೆಚ್‌ಆರ್‌ಸಿ ನೋಟಿಸ್ ಜಾರಿ ಮಾಡಿದೆ. ಆಯೋಗವು ತನ್ನ ಕಾನೂನು ಮತ್ತು ತನಿಖಾ ಅಧಿಕಾರಿಗಳ ಜಂಟಿ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ಒಂದು ವಾರದಲ್ಲಿ ವರದಿ ಪಡೆಯಲು ನಿರ್ಧರಿಸಿದೆ.

ನವೆಂಬರ್ 16ರಂದು ತೆಲಂಗಾಣ ತೆಲಂಗಾಣ ಎಸ್‌ಸಿ/ಎಸ್‌ಟಿ ಆಯೋಗದ ಅಧ್ಯಕ್ಷ ಬಕ್ಕಿ ವೆಂಕಟಯ್ಯ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಲಗಚರ್ಲಾ ಗ್ರಾಮಸ್ಥರು ದೂರು ಸಲ್ಲಿಸಿದ್ದರು.

ನವೆಂಬರ್ 11 ರಂದು ಗ್ರಾಮದಲ್ಲಿ ಅಧಿಕಾರಿಗಳ ಮೇಲೆ ದಾಳಿ ನಡೆದ ನಂತರ, ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 6 ಗಂಟೆಯ ನಡುವೆ ಬುಡಕಟ್ಟು ನಿವಾಸಿಗಳ ಮನೆಗಳಿಗೆ ‘ಪೊಲೀಸ್ ಸಿಬ್ಬಂದಿ ಹಿಂಸಾತ್ಮಕವಾಗಿ ಪ್ರವೇಶಿಸಿ’ ಬಾಗಿಲು ಒಡೆದು ಗರ್ಭಿಣಿಯರು ಸೇರಿದಂತೆ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.

ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದವರಲ್ಲಿ ಹೆಚ್ಚಿನವರು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಸೇರಿದವರು. ಈ ಪೈಕಿ 12 ಮಂದಿ ಆಯೋಗವನ್ನು ಭೇಟಿಯಾಗಿ ನ್ಯಾಯ ದೊರಕಿಸುವಂತೆ ದೂರು ಸಲ್ಲಿಸಿದ್ದಾರೆ ಎಂದು ಎನ್‌ಹೆಚ್‌ಆರ್‌ಸಿ ತಿಳಿಸಿದೆ.

ವರದಿಗಳ ಪ್ರಕಾರ, ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ಸ್ವಕ್ಷೇತ್ರ ಕೊಂಡಂಗಲ್‌ ವ್ಯಾಪ್ತಿಯ ದಲಿತ, ಬುಡಕಟ್ಟು ನಿವಾಸಿಗಳ ಗ್ರಾಮ ಲಗಚರ್ಲಾದಲ್ಲಿ ಸರ್ಕಾರ ಅತ್ಯಾಧುನಿಕ ಫಾರ್ಮಾ ಸಿಟಿ ಸ್ಥಾಪನೆ ಮುಂದಾಗಿದೆ. ಇದಕ್ಕಾಗಿ ಈ ಹಿಂದಿನ ಸರ್ಕಾರ 16 ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಈಗ ಮತ್ತೆ 1,374 ಎಕರೆ ಭೂಮಿಯ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಈ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಗ್ರಾಮಸ್ಥರ ಮೇಲೆ ದಬ್ಬಾಳಿಕೆ ನಡೆಸುತ್ತಿದ ಆರೋಪವಿದೆ.

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಮನವೊಲಿಸಲು ಮತ್ತು ಅವರ ಅಹವಾಲು ಸ್ವೀಕರಿಸಲು ನವೆಂಬರ್ 11 ರಂದು ಗ್ರಾಮಕ್ಕೆ ಜಿಲ್ಲಾಧಿಕಾರಿ ಪ್ರತೀಕ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಲಿಂಗಯ್ಯ ನಾಯ್ಕ್, ಕೊಡಂಗಲ್ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ವೆಂಕಟ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿದ ಗ್ರಾಮದ ನಿವಾಸಿಗಳು, ಅಧಿಕಾರಿಗಳನ್ನು ಓಡಿಸಿದ್ದರು. ಅವರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಜಖಂಗೊಳಿಸಿದ್ದರು.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಕ್ಷೇತ್ರ ಕೊಡಂಗಲ್‌ನಲ್ಲಿ ನಡೆದ ಈ ಘಟನೆಯು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್‌ಎಸ್ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಕೊಡಂಗಲ್‌ನ ಮಾಜಿ ಬಿಆರ್‌ಎಸ್ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಸೇರಿದಂತೆ ಹಲವು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಅವರ ಸೂಚನೆ ಮೇರೆಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಭಾಗವಾಗಿ ಹಿಂಸಾಚಾರವನ್ನು ಪ್ರಚೋದಿಸಿದ್ದಾಗಿ ನರೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾರೆ ಎಂದು ರಿಮಾಂಡ್ ವರದಿಯಲ್ಲಿ ಪೊಲೀಸರು ತಿಳಿಸಿದ್ದರು.

ರಾಜಕೀಯ ಲಾಭ ಗಳಿಸುವುದು ಮತ್ತು ತೆಲಂಗಾಣ ಸರ್ಕಾರದ ಪ್ರತಿಷ್ಠೆಗೆ ಮಸಿ ಬಳಿಯುವುದು ಅವರ ಗುರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಟಿಆರ್‌, ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದರು. ಈ ನಡುವೆ ರಾತ್ರೋರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಲಂಬಾಡಾ ಬುಡಕಟ್ಟು ಜನಾಂಗದ ಲಗಚಾರ್ಲ ನಿವಾಸಿಗಳ ಗುಂಪಿನ ಹೆಸರಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. “ಪೊಲೀಸರು ನಮ್ಮ ಮನೆಗಳಿಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆಯ ಮೇಲೆ ಹಿಂಸಾತ್ಮಕ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗಳನ್ನು ಉಂಟು ಮಾಡಿದ್ದಾರೆ. ನಾವು ರಾತ್ರೋ ರಾತ್ರಿ ಮನೆ ಬಿಟ್ಟು ಓಡಿ ಹೋಗಿ ಹೊಲ, ಕಾಡುಗಳಲ್ಲಿ ಆಶ್ರಯ ಪಡೆದೆವು” ಎಂದು ದೂರುದಾರರು ಹೇಳಿದ್ದರು.

“ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿದ ಮೇಲೆ ಬಂಧಿತರಾಗಿರುವ ಹಲವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರು ಸರ್ಕಾರಿ ಅಧಿಕಾರಿಗಳ ಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ದಾಳಿಯಲ್ಲಿ ಜಿಲ್ಲಾಧಿಕಾರಿ ಪ್ರತೀಕ್ ಜೈನ್ ರಕ್ತಸ್ರಾವದಿಂದ ಗಾಯಗೊಂಡಿದ್ದಾರೆ ಎಂದು ರಿಮಾಂಡ್ ವರದಿ ಹೇಳಿದೆ. ಆದರೆ, ಘಟನೆ ನಡೆದ ಮರುದಿನ ಪತ್ರಿಕಾಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ, “ಯಾವುದೇ ಹಿಂಸಾಚಾರ ನಡೆದಿಲ್ಲ ಮತ್ತು ಯಾವುದೇ ರೀತಿಯ ಗಾಯಗಳಾಗಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಬಂಧಿತರ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತ” ಎಂದು ದೂರಿನಲ್ಲಿ ತಿಳಿಸಿದ್ದರು.

“ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಜೊತೆಗೂಡಿ ಗ್ರಾಮದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ, ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಬಂಧಿತ ಆರೋಪಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ ಮತ್ತು ಮ್ಯಾಜಿಸ್ಟ್ರೇಟ್‌ಗೆ ಹಿಂಸೆಯನ್ನು ಪ್ರಸ್ತಾಪಿಸದಂತೆ ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದರು.

ಆರೋಪಗಳ ಕುರಿತು ತನಿಖೆ ನಡೆಸಲು ಎಸ್‌ಸಿ/ಎಸ್‌ಟಿ ಆಯೋಗವು ಶೀಘ್ರವೇ ಲಗಚರ್ಲಾ ಗ್ರಾಮಕ್ಕೆ ಭೇಟಿ ನೀಡಲಿದೆ ಎಂದು ಬಕ್ಕಿ ವೆಂಕಟಯ್ಯ ಭರವಸೆ ನೀಡಿದ್ದರು. ಈಗ ಎನ್‌ಹೆಚ್‌ಆರ್‌ಸಿ ಈ ವಿಚಾರದಲ್ಲಿ ತನಿಖೆಗೆ ಮುಂದಾಗಿದೆ.

ಸಿಎಂ ರೇವಂತ್ ರೆಡ್ಡಿ ಕ್ಷೇತ್ರದಲ್ಲಿ ಫಾರ್ಮಾ ಕಂಪನಿ ಸ್ಥಾಪನೆ, ಪ್ರತಿಪಕ್ಷ ಬಿಆರ್‌ಎಸ್‌ ವಿರುದ್ದ ಗ್ರಾಮಸ್ಥರನ್ನು ಪ್ರಚೋಧಿಸಿದ ಆರೋಪ, ಈ ನಡುವೆ ಕೇಂದ್ರ ಸರ್ಕಾರದ ನೆರಳಿನಲ್ಲಿರುವ ಮಾನವ ಹಕ್ಕುಗಳ ಆಯೋಗ ಪ್ರಕರಣಕ್ಕೆ ಪ್ರವೇಶಿಸಿರುವುದು ಎಲ್ಲಾ ಸೇರಿ ಇಡೀ ಪ್ರಕರಣ ರಾಜಕೀಯ ತಿಕ್ಕಾಟದ ವಿಷಯವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...