Homeದಲಿತ್ ಫೈಲ್ಸ್ತೆಲಂಗಾಣ | ಲಗಚರ್ಲಾ ಪೊಲೀಸ್ ದೌರ್ಜನ್ಯ ಪ್ರಕರಣ : ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ತೆಲಂಗಾಣ | ಲಗಚರ್ಲಾ ಪೊಲೀಸ್ ದೌರ್ಜನ್ಯ ಪ್ರಕರಣ : ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

- Advertisement -
- Advertisement -

ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಲಗಚರ್ಲಾ ಗ್ರಾಮದ ಬುಡಕಟ್ಟು ಜನರ ಮನೆಗಳಿಗೆ ತಡರಾತ್ರಿ ನುಗ್ಗಿದ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ವರದಿ ಕೇಳಿದೆ.

ತೆಲಂಗಾಣದ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ಎರಡು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ಎನ್‌ಹೆಚ್‌ಆರ್‌ಸಿ ನೋಟಿಸ್ ಜಾರಿ ಮಾಡಿದೆ. ಆಯೋಗವು ತನ್ನ ಕಾನೂನು ಮತ್ತು ತನಿಖಾ ಅಧಿಕಾರಿಗಳ ಜಂಟಿ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಿ ಒಂದು ವಾರದಲ್ಲಿ ವರದಿ ಪಡೆಯಲು ನಿರ್ಧರಿಸಿದೆ.

ನವೆಂಬರ್ 16ರಂದು ತೆಲಂಗಾಣ ತೆಲಂಗಾಣ ಎಸ್‌ಸಿ/ಎಸ್‌ಟಿ ಆಯೋಗದ ಅಧ್ಯಕ್ಷ ಬಕ್ಕಿ ವೆಂಕಟಯ್ಯ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಲಗಚರ್ಲಾ ಗ್ರಾಮಸ್ಥರು ದೂರು ಸಲ್ಲಿಸಿದ್ದರು.

ನವೆಂಬರ್ 11 ರಂದು ಗ್ರಾಮದಲ್ಲಿ ಅಧಿಕಾರಿಗಳ ಮೇಲೆ ದಾಳಿ ನಡೆದ ನಂತರ, ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 6 ಗಂಟೆಯ ನಡುವೆ ಬುಡಕಟ್ಟು ನಿವಾಸಿಗಳ ಮನೆಗಳಿಗೆ ‘ಪೊಲೀಸ್ ಸಿಬ್ಬಂದಿ ಹಿಂಸಾತ್ಮಕವಾಗಿ ಪ್ರವೇಶಿಸಿ’ ಬಾಗಿಲು ಒಡೆದು ಗರ್ಭಿಣಿಯರು ಸೇರಿದಂತೆ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.

ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದವರಲ್ಲಿ ಹೆಚ್ಚಿನವರು ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಸೇರಿದವರು. ಈ ಪೈಕಿ 12 ಮಂದಿ ಆಯೋಗವನ್ನು ಭೇಟಿಯಾಗಿ ನ್ಯಾಯ ದೊರಕಿಸುವಂತೆ ದೂರು ಸಲ್ಲಿಸಿದ್ದಾರೆ ಎಂದು ಎನ್‌ಹೆಚ್‌ಆರ್‌ಸಿ ತಿಳಿಸಿದೆ.

ವರದಿಗಳ ಪ್ರಕಾರ, ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ಸ್ವಕ್ಷೇತ್ರ ಕೊಂಡಂಗಲ್‌ ವ್ಯಾಪ್ತಿಯ ದಲಿತ, ಬುಡಕಟ್ಟು ನಿವಾಸಿಗಳ ಗ್ರಾಮ ಲಗಚರ್ಲಾದಲ್ಲಿ ಸರ್ಕಾರ ಅತ್ಯಾಧುನಿಕ ಫಾರ್ಮಾ ಸಿಟಿ ಸ್ಥಾಪನೆ ಮುಂದಾಗಿದೆ. ಇದಕ್ಕಾಗಿ ಈ ಹಿಂದಿನ ಸರ್ಕಾರ 16 ಸಾವಿರ ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಈಗ ಮತ್ತೆ 1,374 ಎಕರೆ ಭೂಮಿಯ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಈ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಗ್ರಾಮಸ್ಥರ ಮೇಲೆ ದಬ್ಬಾಳಿಕೆ ನಡೆಸುತ್ತಿದ ಆರೋಪವಿದೆ.

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಮನವೊಲಿಸಲು ಮತ್ತು ಅವರ ಅಹವಾಲು ಸ್ವೀಕರಿಸಲು ನವೆಂಬರ್ 11 ರಂದು ಗ್ರಾಮಕ್ಕೆ ಜಿಲ್ಲಾಧಿಕಾರಿ ಪ್ರತೀಕ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ ಲಿಂಗಯ್ಯ ನಾಯ್ಕ್, ಕೊಡಂಗಲ್ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ವೆಂಕಟ್ ರೆಡ್ಡಿ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿದ ಗ್ರಾಮದ ನಿವಾಸಿಗಳು, ಅಧಿಕಾರಿಗಳನ್ನು ಓಡಿಸಿದ್ದರು. ಅವರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಜಖಂಗೊಳಿಸಿದ್ದರು.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಕ್ಷೇತ್ರ ಕೊಡಂಗಲ್‌ನಲ್ಲಿ ನಡೆದ ಈ ಘಟನೆಯು ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್‌ಎಸ್ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಕೊಡಂಗಲ್‌ನ ಮಾಜಿ ಬಿಆರ್‌ಎಸ್ ಶಾಸಕ ಪಟ್ನಂ ನರೇಂದ್ರ ರೆಡ್ಡಿ ಸೇರಿದಂತೆ ಹಲವು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಬಿಆರ್‌ಎಸ್ ನಾಯಕ ಕೆಟಿ ರಾಮರಾವ್ ಅವರ ಸೂಚನೆ ಮೇರೆಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದ ಭಾಗವಾಗಿ ಹಿಂಸಾಚಾರವನ್ನು ಪ್ರಚೋದಿಸಿದ್ದಾಗಿ ನರೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾರೆ ಎಂದು ರಿಮಾಂಡ್ ವರದಿಯಲ್ಲಿ ಪೊಲೀಸರು ತಿಳಿಸಿದ್ದರು.

ರಾಜಕೀಯ ಲಾಭ ಗಳಿಸುವುದು ಮತ್ತು ತೆಲಂಗಾಣ ಸರ್ಕಾರದ ಪ್ರತಿಷ್ಠೆಗೆ ಮಸಿ ಬಳಿಯುವುದು ಅವರ ಗುರಿಯಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಟಿಆರ್‌, ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದ್ದರು. ಈ ನಡುವೆ ರಾತ್ರೋರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಲಂಬಾಡಾ ಬುಡಕಟ್ಟು ಜನಾಂಗದ ಲಗಚಾರ್ಲ ನಿವಾಸಿಗಳ ಗುಂಪಿನ ಹೆಸರಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿತ್ತು. “ಪೊಲೀಸರು ನಮ್ಮ ಮನೆಗಳಿಗೆ ಅಕ್ರಮವಾಗಿ ಪ್ರವೇಶಿಸಿ ಮಹಿಳೆಯ ಮೇಲೆ ಹಿಂಸಾತ್ಮಕ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗಳನ್ನು ಉಂಟು ಮಾಡಿದ್ದಾರೆ. ನಾವು ರಾತ್ರೋ ರಾತ್ರಿ ಮನೆ ಬಿಟ್ಟು ಓಡಿ ಹೋಗಿ ಹೊಲ, ಕಾಡುಗಳಲ್ಲಿ ಆಶ್ರಯ ಪಡೆದೆವು” ಎಂದು ದೂರುದಾರರು ಹೇಳಿದ್ದರು.

“ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿದ ಮೇಲೆ ಬಂಧಿತರಾಗಿರುವ ಹಲವರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರು ಸರ್ಕಾರಿ ಅಧಿಕಾರಿಗಳ ಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ದಾಳಿಯಲ್ಲಿ ಜಿಲ್ಲಾಧಿಕಾರಿ ಪ್ರತೀಕ್ ಜೈನ್ ರಕ್ತಸ್ರಾವದಿಂದ ಗಾಯಗೊಂಡಿದ್ದಾರೆ ಎಂದು ರಿಮಾಂಡ್ ವರದಿ ಹೇಳಿದೆ. ಆದರೆ, ಘಟನೆ ನಡೆದ ಮರುದಿನ ಪತ್ರಿಕಾಗೋಷ್ಠಿ ನಡೆಸಿದ್ದ ಜಿಲ್ಲಾಧಿಕಾರಿ, “ಯಾವುದೇ ಹಿಂಸಾಚಾರ ನಡೆದಿಲ್ಲ ಮತ್ತು ಯಾವುದೇ ರೀತಿಯ ಗಾಯಗಳಾಗಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಬಂಧಿತರ ವಿರುದ್ಧ ಮಾಡಿರುವ ಆರೋಪಗಳು ರಾಜಕೀಯ ಪ್ರೇರಿತ” ಎಂದು ದೂರಿನಲ್ಲಿ ತಿಳಿಸಿದ್ದರು.

“ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಜೊತೆಗೂಡಿ ಗ್ರಾಮದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಮಹಿಳೆಯರ ವಿರುದ್ಧ ಜಾತಿ ನಿಂದನೆ ಪದಗಳನ್ನು ಬಳಸಿದ್ದಾರೆ, ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಬಂಧಿತ ಆರೋಪಿಗಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ ಮತ್ತು ಮ್ಯಾಜಿಸ್ಟ್ರೇಟ್‌ಗೆ ಹಿಂಸೆಯನ್ನು ಪ್ರಸ್ತಾಪಿಸದಂತೆ ಬೆದರಿಕೆ ಹಾಕಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದರು.

ಆರೋಪಗಳ ಕುರಿತು ತನಿಖೆ ನಡೆಸಲು ಎಸ್‌ಸಿ/ಎಸ್‌ಟಿ ಆಯೋಗವು ಶೀಘ್ರವೇ ಲಗಚರ್ಲಾ ಗ್ರಾಮಕ್ಕೆ ಭೇಟಿ ನೀಡಲಿದೆ ಎಂದು ಬಕ್ಕಿ ವೆಂಕಟಯ್ಯ ಭರವಸೆ ನೀಡಿದ್ದರು. ಈಗ ಎನ್‌ಹೆಚ್‌ಆರ್‌ಸಿ ಈ ವಿಚಾರದಲ್ಲಿ ತನಿಖೆಗೆ ಮುಂದಾಗಿದೆ.

ಸಿಎಂ ರೇವಂತ್ ರೆಡ್ಡಿ ಕ್ಷೇತ್ರದಲ್ಲಿ ಫಾರ್ಮಾ ಕಂಪನಿ ಸ್ಥಾಪನೆ, ಪ್ರತಿಪಕ್ಷ ಬಿಆರ್‌ಎಸ್‌ ವಿರುದ್ದ ಗ್ರಾಮಸ್ಥರನ್ನು ಪ್ರಚೋಧಿಸಿದ ಆರೋಪ, ಈ ನಡುವೆ ಕೇಂದ್ರ ಸರ್ಕಾರದ ನೆರಳಿನಲ್ಲಿರುವ ಮಾನವ ಹಕ್ಕುಗಳ ಆಯೋಗ ಪ್ರಕರಣಕ್ಕೆ ಪ್ರವೇಶಿಸಿರುವುದು ಎಲ್ಲಾ ಸೇರಿ ಇಡೀ ಪ್ರಕರಣ ರಾಜಕೀಯ ತಿಕ್ಕಾಟದ ವಿಷಯವಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ : ತೆಲಂಗಾಣ | ತಡರಾತ್ರಿ ಬುಡಕಟ್ಟು ಜನರ ಮನೆಗಳಿಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ ಆರೋಪ : ಎಸ್‌ಸಿ, ಎಸ್‌ಟಿ ಆಯೋಗಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...