Homeರಾಷ್ಟ್ರೀಯತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ...

ತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ ಎಸ್‌ಐಟಿ

- Advertisement -
- Advertisement -

ಆಪರೇಷನ್ ಕಮಲ ಪ್ರಕರಣದ ವಿಚಾರಣೆಗೆ ಸಮನ್ಸ್‌ ನೀಡಿದ ಹೊರತಾಗಿಯು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಇತರ ಇಬ್ಬರು ಆರೋಪಿಗಳು ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ಎಸ್‌ಐಟಿ ಮಂಗಳವಾರ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಬಿ.ಎಲ್‌. ಸಂತೋಷ್‌ಗೆ ದೆಹಲಿ ಪೊಲೀಸರ ಮೂಲಕ ನೋಟಿಸ್ ನೀಡಲಾಗಿತ್ತು ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಬಿಜೆಪಿಯ ಪ್ರಮುಖರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠವು ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ, ಎಸ್‌ಐಟಿ ತನಿಖೆಯ ಪ್ರಗತಿಯನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ ಭಾರತ್ ಧರ್ಮ ಜನಸೇನಾ (ಬಿಡಿಜೆಎಸ್) ಅಧ್ಯಕ್ಷ ತುಷಾರ್ ವೆಲ್ಲಪಲ್ಲಿ ಮತ್ತು ಡಾ. ಜಗ್ಗು ಸ್ವಾಮಿ ಕೂಡ ಎಸ್‌ಐಟಿ ಮುಂದೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ ಆರೋಪ

ಕರೀಂನಗರದ ವಕೀಲ ಭೂಸಾರಪು ಶ್ರೀನಿವಾಸ್ ಅವರೊಂದಿಗೆ ಮೂವರಿಗೆ ಎಸ್‌ಐಟಿ ಕಳೆದ ವಾರ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21 ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಆದರೆ, ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಸಂಬಂಧಿ ಎನ್ನಲಾದ ಶ್ರೀನಿವಾಸ್ ಮಾತ್ರ ತನಿಖಾ ತಂಡದ ಮುಂದೆ ಹಾಜರಾಗಿದ್ದರು. ಸತತ ಎರಡನೇ ದಿನವಾದ ಮಂಗಳವಾರವೂ ಶ್ರೀನಿವಾಸ್‌ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದರು. ಅವರನ್ನು ಸುಮಾರು ಏಳು ಗಂಟೆಗಳ ಕಾಲ ಪ್ರಶ್ನಿಸಲಾಗಿತ್ತು.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ನಾಲ್ವರು ಶಾಸಕರನ್ನು ಆಪರೇಷನ್ ಮೂಲಕ ಖರೀದಿಸಲು ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಪೈಕಿ ಒಬ್ಬರಾದ ಸಿಂಹಯಾಜಿ ಅವರಿಗೆ ಶ್ರೀನಿವಾಸ್ ವಿಮಾನ ವೆಚ್ಚಕ್ಕೆ ಹಣ ನೀಡಿದ್ದರು. ತಾನು ಸಿಂಹಯಾಜಿ ಅವರ ಮೇಲಿನ ಗೌರವದಿಂದ ವಿಮಾನ ಟಿಕೆಟ್ ಕಾಯ್ದಿರಿಸಿದ್ದೇನೆ ಹೊರತು ಬಿಜೆಪಿ ಅಥವಾ ಶಾಸಕರ ಆಪರೇಷನ್ ಕಲಮ ಪ್ರಕರಣದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕರ ಖರೀದಿಗೆ ಯತ್ನ: ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ಗೆ ಸಮನ್ಸ್

ಬಿ.ಎಲ್‌. ಸಂತೋಷ್‌ಗೆ ನೀಡಿದ್ದ ನೋಟಿಸ್‌ಗೆ ತಡೆ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಮನವಿಯನ್ನು ತೆಲಂಗಾಣ ಹೈಕೋರ್ಟ್ ನವೆಂಬರ್ 19 ರಂದು ತಿರಸ್ಕರಿಸಿತ್ತು. ಆದಾಗ್ಯೂ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ಎಸ್‌ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿರುವುದರಿಂದ ಸಂತೋಷ್ ಅವರನ್ನು ಬಂಧಿಸಬಾರದು ಎಂದು ನ್ಯಾಯಮೂರ್ತಿ ಬಿ. ವಿಜಯ್‌ಸೇನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಸ್‌ಐಟಿ ನೋಟಿಸ್‌ನಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಕೂಡಾ ಸಂತೋಷ್‌ಗೆ ಸೂಚಿಸಿದ್ದರು.

ಅದೇ ದಿನ ಸಂತೋಷ್‌ಗೆ ನೋಟಿಸ್‌ ನೀಡುವಲ್ಲಿ ಎಸ್‌ಐಟಿಗೆ ಸಹಕರಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡುವಂತೆ ಕೋರಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಯಾವುದೇ ವಿಳಂಬ ಮಾಡದೆ ಸಂತೋಷ್‌ಗೆ ನೋಟಿಸ್ ಜಾರಿ ಮಾಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದರು. ಹೀಗಾಗಿ ದೆಹಲಿ ಪೊಲೀಸ್ ಅಧಿಕಾರಿಗೆ ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ಸಂತೋಷ್‌ಗೆ ನೋಟಿಸ್ ನೀಡಲು ಅವರು ಎಸ್‌ಐಟಿಗೆ ಅವಕಾಶ ನೀಡಿದ್ದರು.

ಕಳೆದ ತಿಂಗಳು ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಭಾರಿ ಹಣದ ಆಮಿಷ ನೀಡಿ ಬಿಜೆಪಿಗೆ ಸೆಳೆಯಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದ ಮೂವರು ಬಿಜೆಪಿ ಏಜೆಂಟ್‌ಗಳ ನಡುವಿನ ಸಂಭಾಷಣೆಯಲ್ಲಿ ಸಂತೋಷ್ ಹೆಸರು ಕೂಡಾ ಕೇಳಿಬಂದಿತ್ತು. ಎಸ್‌ಐಟಿ ಕೇರಳದ ವೈದ್ಯ ಜಗ್ಗು ಸ್ವಾಮಿ ಮತ್ತು ಬಿಡಿಜೆಎಸ್ ಅಧ್ಯಕ್ಷ ವೆಲ್ಲಪಲ್ಲಿ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಿದೆ.

ಇದನ್ನೂ ಓದಿ: ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಕಳೆದ ತಿಂಗಳು ದಾಖಲಾದ ಪ್ರಕರಣದಲ್ಲಿ ಬಂಧಿತರಾದ ಮೂವರು ಆರೋಪಿಗಳ ಜತೆಗಿನ ಸಂಬಂಧದ ಆರೋಪದ ಮೇರೆಗೆ ನಾಲ್ವರನ್ನು ಒಂದೇ ದಿನ ವಿಚಾರಣೆಗೆ ಕರೆಸಲಾಗಿತ್ತು.

ಜಗ್ಗು ಕೊಟ್ಟಿಲಿಲ್ ಅಲಿಯಾಸ್ ಜಗ್ಗು ಸ್ವಾಮಿ ಕೊಚ್ಚಿಯ ಅಮೃತ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ವೆಲ್ಲಪಲ್ಲಿ ಕೇರಳದ ಬಿಜೆಪಿಯ ಮಿತ್ರಪಕ್ಷವಾದ ಬಿಡಿಜೆಎಸ್‌ನ ನಾಯಕರಾಗಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ನಿಂದ ಸ್ಪರ್ಧಿಸಿದ್ದ ವೆಲ್ಲಪಲ್ಲಿ ಅವರ ಹೆಸರು, ಮೂವರು ಆರೋಪಿಗಳು ಟಿಆರ್‌ಎಸ್ ಶಾಸಕರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ಹೇಳಿಕೊಂಡಿದ್ದರು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಮನವಿಯನ್ನು ತೆಲಂಗಾಣ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿದೆ ಆದರೆ ಪ್ರಕರಣದ ತನಿಖೆಯನ್ನು ಏಕ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ತೀರ್ಪು ನೀಡಿತ್ತು. ತನಿಖೆಯ ಪ್ರಗತಿಯ ಕುರಿತು ನವೆಂಬರ್ 29 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಅದು ಎಸ್‌ಐಟಿಗೆ ಕೇಳಿದೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಈ ಮಧ್ಯೆ, ಮೂವರು ಆರೋಪಿಗಳನ್ನು ಒಂದು ವಾರ ಕಸ್ಟಡಿಗೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಶೇಷ ಎಸಿಬಿ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಈ ಹಿಂದೆ ಆರೋಪಿಗಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಎಸ್‌ಐಟಿ, ಪ್ರಕರಣದಲ್ಲಿ ಭಾಗಿಯಾಗಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಇನ್ನೊಂದು ವಾರ ಅವರ ಕಸ್ಟಡಿ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...