Homeರಾಷ್ಟ್ರೀಯತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ...

ತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ ಎಸ್‌ಐಟಿ

- Advertisement -
- Advertisement -

ಆಪರೇಷನ್ ಕಮಲ ಪ್ರಕರಣದ ವಿಚಾರಣೆಗೆ ಸಮನ್ಸ್‌ ನೀಡಿದ ಹೊರತಾಗಿಯು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಇತರ ಇಬ್ಬರು ಆರೋಪಿಗಳು ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ಎಸ್‌ಐಟಿ ಮಂಗಳವಾರ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಬಿ.ಎಲ್‌. ಸಂತೋಷ್‌ಗೆ ದೆಹಲಿ ಪೊಲೀಸರ ಮೂಲಕ ನೋಟಿಸ್ ನೀಡಲಾಗಿತ್ತು ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಬಿಜೆಪಿಯ ಪ್ರಮುಖರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠವು ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ, ಎಸ್‌ಐಟಿ ತನಿಖೆಯ ಪ್ರಗತಿಯನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ ಭಾರತ್ ಧರ್ಮ ಜನಸೇನಾ (ಬಿಡಿಜೆಎಸ್) ಅಧ್ಯಕ್ಷ ತುಷಾರ್ ವೆಲ್ಲಪಲ್ಲಿ ಮತ್ತು ಡಾ. ಜಗ್ಗು ಸ್ವಾಮಿ ಕೂಡ ಎಸ್‌ಐಟಿ ಮುಂದೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ ಆರೋಪ

ಕರೀಂನಗರದ ವಕೀಲ ಭೂಸಾರಪು ಶ್ರೀನಿವಾಸ್ ಅವರೊಂದಿಗೆ ಮೂವರಿಗೆ ಎಸ್‌ಐಟಿ ಕಳೆದ ವಾರ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21 ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಆದರೆ, ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಸಂಬಂಧಿ ಎನ್ನಲಾದ ಶ್ರೀನಿವಾಸ್ ಮಾತ್ರ ತನಿಖಾ ತಂಡದ ಮುಂದೆ ಹಾಜರಾಗಿದ್ದರು. ಸತತ ಎರಡನೇ ದಿನವಾದ ಮಂಗಳವಾರವೂ ಶ್ರೀನಿವಾಸ್‌ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದರು. ಅವರನ್ನು ಸುಮಾರು ಏಳು ಗಂಟೆಗಳ ಕಾಲ ಪ್ರಶ್ನಿಸಲಾಗಿತ್ತು.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ನಾಲ್ವರು ಶಾಸಕರನ್ನು ಆಪರೇಷನ್ ಮೂಲಕ ಖರೀದಿಸಲು ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಪೈಕಿ ಒಬ್ಬರಾದ ಸಿಂಹಯಾಜಿ ಅವರಿಗೆ ಶ್ರೀನಿವಾಸ್ ವಿಮಾನ ವೆಚ್ಚಕ್ಕೆ ಹಣ ನೀಡಿದ್ದರು. ತಾನು ಸಿಂಹಯಾಜಿ ಅವರ ಮೇಲಿನ ಗೌರವದಿಂದ ವಿಮಾನ ಟಿಕೆಟ್ ಕಾಯ್ದಿರಿಸಿದ್ದೇನೆ ಹೊರತು ಬಿಜೆಪಿ ಅಥವಾ ಶಾಸಕರ ಆಪರೇಷನ್ ಕಲಮ ಪ್ರಕರಣದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕರ ಖರೀದಿಗೆ ಯತ್ನ: ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ಗೆ ಸಮನ್ಸ್

ಬಿ.ಎಲ್‌. ಸಂತೋಷ್‌ಗೆ ನೀಡಿದ್ದ ನೋಟಿಸ್‌ಗೆ ತಡೆ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಮನವಿಯನ್ನು ತೆಲಂಗಾಣ ಹೈಕೋರ್ಟ್ ನವೆಂಬರ್ 19 ರಂದು ತಿರಸ್ಕರಿಸಿತ್ತು. ಆದಾಗ್ಯೂ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ಎಸ್‌ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿರುವುದರಿಂದ ಸಂತೋಷ್ ಅವರನ್ನು ಬಂಧಿಸಬಾರದು ಎಂದು ನ್ಯಾಯಮೂರ್ತಿ ಬಿ. ವಿಜಯ್‌ಸೇನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಸ್‌ಐಟಿ ನೋಟಿಸ್‌ನಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಕೂಡಾ ಸಂತೋಷ್‌ಗೆ ಸೂಚಿಸಿದ್ದರು.

ಅದೇ ದಿನ ಸಂತೋಷ್‌ಗೆ ನೋಟಿಸ್‌ ನೀಡುವಲ್ಲಿ ಎಸ್‌ಐಟಿಗೆ ಸಹಕರಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡುವಂತೆ ಕೋರಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಯಾವುದೇ ವಿಳಂಬ ಮಾಡದೆ ಸಂತೋಷ್‌ಗೆ ನೋಟಿಸ್ ಜಾರಿ ಮಾಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದರು. ಹೀಗಾಗಿ ದೆಹಲಿ ಪೊಲೀಸ್ ಅಧಿಕಾರಿಗೆ ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ಸಂತೋಷ್‌ಗೆ ನೋಟಿಸ್ ನೀಡಲು ಅವರು ಎಸ್‌ಐಟಿಗೆ ಅವಕಾಶ ನೀಡಿದ್ದರು.

ಕಳೆದ ತಿಂಗಳು ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಭಾರಿ ಹಣದ ಆಮಿಷ ನೀಡಿ ಬಿಜೆಪಿಗೆ ಸೆಳೆಯಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದ ಮೂವರು ಬಿಜೆಪಿ ಏಜೆಂಟ್‌ಗಳ ನಡುವಿನ ಸಂಭಾಷಣೆಯಲ್ಲಿ ಸಂತೋಷ್ ಹೆಸರು ಕೂಡಾ ಕೇಳಿಬಂದಿತ್ತು. ಎಸ್‌ಐಟಿ ಕೇರಳದ ವೈದ್ಯ ಜಗ್ಗು ಸ್ವಾಮಿ ಮತ್ತು ಬಿಡಿಜೆಎಸ್ ಅಧ್ಯಕ್ಷ ವೆಲ್ಲಪಲ್ಲಿ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಿದೆ.

ಇದನ್ನೂ ಓದಿ: ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಕಳೆದ ತಿಂಗಳು ದಾಖಲಾದ ಪ್ರಕರಣದಲ್ಲಿ ಬಂಧಿತರಾದ ಮೂವರು ಆರೋಪಿಗಳ ಜತೆಗಿನ ಸಂಬಂಧದ ಆರೋಪದ ಮೇರೆಗೆ ನಾಲ್ವರನ್ನು ಒಂದೇ ದಿನ ವಿಚಾರಣೆಗೆ ಕರೆಸಲಾಗಿತ್ತು.

ಜಗ್ಗು ಕೊಟ್ಟಿಲಿಲ್ ಅಲಿಯಾಸ್ ಜಗ್ಗು ಸ್ವಾಮಿ ಕೊಚ್ಚಿಯ ಅಮೃತ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ವೆಲ್ಲಪಲ್ಲಿ ಕೇರಳದ ಬಿಜೆಪಿಯ ಮಿತ್ರಪಕ್ಷವಾದ ಬಿಡಿಜೆಎಸ್‌ನ ನಾಯಕರಾಗಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ನಿಂದ ಸ್ಪರ್ಧಿಸಿದ್ದ ವೆಲ್ಲಪಲ್ಲಿ ಅವರ ಹೆಸರು, ಮೂವರು ಆರೋಪಿಗಳು ಟಿಆರ್‌ಎಸ್ ಶಾಸಕರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ಹೇಳಿಕೊಂಡಿದ್ದರು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಮನವಿಯನ್ನು ತೆಲಂಗಾಣ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿದೆ ಆದರೆ ಪ್ರಕರಣದ ತನಿಖೆಯನ್ನು ಏಕ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ತೀರ್ಪು ನೀಡಿತ್ತು. ತನಿಖೆಯ ಪ್ರಗತಿಯ ಕುರಿತು ನವೆಂಬರ್ 29 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಅದು ಎಸ್‌ಐಟಿಗೆ ಕೇಳಿದೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಈ ಮಧ್ಯೆ, ಮೂವರು ಆರೋಪಿಗಳನ್ನು ಒಂದು ವಾರ ಕಸ್ಟಡಿಗೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಶೇಷ ಎಸಿಬಿ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಈ ಹಿಂದೆ ಆರೋಪಿಗಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಎಸ್‌ಐಟಿ, ಪ್ರಕರಣದಲ್ಲಿ ಭಾಗಿಯಾಗಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಇನ್ನೊಂದು ವಾರ ಅವರ ಕಸ್ಟಡಿ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...