Homeರಾಷ್ಟ್ರೀಯತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ...

ತೆಲಂಗಾಣ ಆಪರೇಷನ್ ಕಮಲ | ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಕರಿಸುತ್ತಿಲ್ಲ: ತೆಲಂಗಾಣ ಹೈಕೋರ್ಟ್‌ಗೆ ಎಸ್‌ಐಟಿ

- Advertisement -
- Advertisement -

ಆಪರೇಷನ್ ಕಮಲ ಪ್ರಕರಣದ ವಿಚಾರಣೆಗೆ ಸಮನ್ಸ್‌ ನೀಡಿದ ಹೊರತಾಗಿಯು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಇತರ ಇಬ್ಬರು ಆರೋಪಿಗಳು ತೆಲಂಗಾಣ ಪೊಲೀಸರ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ಎಸ್‌ಐಟಿ ಮಂಗಳವಾರ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಬಿ.ಎಲ್‌. ಸಂತೋಷ್‌ಗೆ ದೆಹಲಿ ಪೊಲೀಸರ ಮೂಲಕ ನೋಟಿಸ್ ನೀಡಲಾಗಿತ್ತು ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಬಿಜೆಪಿಯ ಪ್ರಮುಖರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠವು ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವುದರಿಂದ, ಎಸ್‌ಐಟಿ ತನಿಖೆಯ ಪ್ರಗತಿಯನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇರಳದ ಭಾರತ್ ಧರ್ಮ ಜನಸೇನಾ (ಬಿಡಿಜೆಎಸ್) ಅಧ್ಯಕ್ಷ ತುಷಾರ್ ವೆಲ್ಲಪಲ್ಲಿ ಮತ್ತು ಡಾ. ಜಗ್ಗು ಸ್ವಾಮಿ ಕೂಡ ಎಸ್‌ಐಟಿ ಮುಂದೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಬಿಜೆಪಿಯಿಂದ ಆಪರೇಷನ್ ಕಮಲಕ್ಕೆ ಯತ್ನ, 30 ಶಾಸಕರಿಗೆ ತಲಾ 100 ಕೋಟಿ ರೂ. ಆಫರ್‌‌’: ತೆಲಂಗಾಣ ಸಿಎಂ ಕೆಸಿಆರ್ ಆರೋಪ

ಕರೀಂನಗರದ ವಕೀಲ ಭೂಸಾರಪು ಶ್ರೀನಿವಾಸ್ ಅವರೊಂದಿಗೆ ಮೂವರಿಗೆ ಎಸ್‌ಐಟಿ ಕಳೆದ ವಾರ ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21 ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಆದರೆ, ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಸಂಬಂಧಿ ಎನ್ನಲಾದ ಶ್ರೀನಿವಾಸ್ ಮಾತ್ರ ತನಿಖಾ ತಂಡದ ಮುಂದೆ ಹಾಜರಾಗಿದ್ದರು. ಸತತ ಎರಡನೇ ದಿನವಾದ ಮಂಗಳವಾರವೂ ಶ್ರೀನಿವಾಸ್‌ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದರು. ಅವರನ್ನು ಸುಮಾರು ಏಳು ಗಂಟೆಗಳ ಕಾಲ ಪ್ರಶ್ನಿಸಲಾಗಿತ್ತು.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ನಾಲ್ವರು ಶಾಸಕರನ್ನು ಆಪರೇಷನ್ ಮೂಲಕ ಖರೀದಿಸಲು ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ಪೈಕಿ ಒಬ್ಬರಾದ ಸಿಂಹಯಾಜಿ ಅವರಿಗೆ ಶ್ರೀನಿವಾಸ್ ವಿಮಾನ ವೆಚ್ಚಕ್ಕೆ ಹಣ ನೀಡಿದ್ದರು. ತಾನು ಸಿಂಹಯಾಜಿ ಅವರ ಮೇಲಿನ ಗೌರವದಿಂದ ವಿಮಾನ ಟಿಕೆಟ್ ಕಾಯ್ದಿರಿಸಿದ್ದೇನೆ ಹೊರತು ಬಿಜೆಪಿ ಅಥವಾ ಶಾಸಕರ ಆಪರೇಷನ್ ಕಲಮ ಪ್ರಕರಣದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಸಕರ ಖರೀದಿಗೆ ಯತ್ನ: ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ಗೆ ಸಮನ್ಸ್

ಬಿ.ಎಲ್‌. ಸಂತೋಷ್‌ಗೆ ನೀಡಿದ್ದ ನೋಟಿಸ್‌ಗೆ ತಡೆ ನೀಡುವಂತೆ ಬಿಜೆಪಿ ರಾಜ್ಯ ಘಟಕದ ಮನವಿಯನ್ನು ತೆಲಂಗಾಣ ಹೈಕೋರ್ಟ್ ನವೆಂಬರ್ 19 ರಂದು ತಿರಸ್ಕರಿಸಿತ್ತು. ಆದಾಗ್ಯೂ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41 ಎ ಅಡಿಯಲ್ಲಿ ಎಸ್‌ಐಟಿ ಈಗಾಗಲೇ ನೋಟಿಸ್ ಜಾರಿ ಮಾಡಿರುವುದರಿಂದ ಸಂತೋಷ್ ಅವರನ್ನು ಬಂಧಿಸಬಾರದು ಎಂದು ನ್ಯಾಯಮೂರ್ತಿ ಬಿ. ವಿಜಯ್‌ಸೇನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಎಸ್‌ಐಟಿ ನೋಟಿಸ್‌ನಲ್ಲಿ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಕೂಡಾ ಸಂತೋಷ್‌ಗೆ ಸೂಚಿಸಿದ್ದರು.

ಅದೇ ದಿನ ಸಂತೋಷ್‌ಗೆ ನೋಟಿಸ್‌ ನೀಡುವಲ್ಲಿ ಎಸ್‌ಐಟಿಗೆ ಸಹಕರಿಸುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡುವಂತೆ ಕೋರಿ ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಯಾವುದೇ ವಿಳಂಬ ಮಾಡದೆ ಸಂತೋಷ್‌ಗೆ ನೋಟಿಸ್ ಜಾರಿ ಮಾಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದರು. ಹೀಗಾಗಿ ದೆಹಲಿ ಪೊಲೀಸ್ ಅಧಿಕಾರಿಗೆ ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ಸಂತೋಷ್‌ಗೆ ನೋಟಿಸ್ ನೀಡಲು ಅವರು ಎಸ್‌ಐಟಿಗೆ ಅವಕಾಶ ನೀಡಿದ್ದರು.

ಕಳೆದ ತಿಂಗಳು ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಭಾರಿ ಹಣದ ಆಮಿಷ ನೀಡಿ ಬಿಜೆಪಿಗೆ ಸೆಳೆಯಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದ ಮೂವರು ಬಿಜೆಪಿ ಏಜೆಂಟ್‌ಗಳ ನಡುವಿನ ಸಂಭಾಷಣೆಯಲ್ಲಿ ಸಂತೋಷ್ ಹೆಸರು ಕೂಡಾ ಕೇಳಿಬಂದಿತ್ತು. ಎಸ್‌ಐಟಿ ಕೇರಳದ ವೈದ್ಯ ಜಗ್ಗು ಸ್ವಾಮಿ ಮತ್ತು ಬಿಡಿಜೆಎಸ್ ಅಧ್ಯಕ್ಷ ವೆಲ್ಲಪಲ್ಲಿ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಿದೆ.

ಇದನ್ನೂ ಓದಿ: ‘ಅಮಿತ್‌ ಶಾ, ಬಿ.ಎಲ್. ಸಂತೋಷ್ ಮತ್ತು ಜೆ.ಪಿ. ನಡ್ಡಾ’: ಆಪರೇಷನ್‌ ಕಮಲ ಹ್ಯಾಂಡಲ್ ಮಾಡುವ ರಾಷ್ಟ್ರೀಯ ತಂಡ!

ಕಳೆದ ತಿಂಗಳು ದಾಖಲಾದ ಪ್ರಕರಣದಲ್ಲಿ ಬಂಧಿತರಾದ ಮೂವರು ಆರೋಪಿಗಳ ಜತೆಗಿನ ಸಂಬಂಧದ ಆರೋಪದ ಮೇರೆಗೆ ನಾಲ್ವರನ್ನು ಒಂದೇ ದಿನ ವಿಚಾರಣೆಗೆ ಕರೆಸಲಾಗಿತ್ತು.

ಜಗ್ಗು ಕೊಟ್ಟಿಲಿಲ್ ಅಲಿಯಾಸ್ ಜಗ್ಗು ಸ್ವಾಮಿ ಕೊಚ್ಚಿಯ ಅಮೃತ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ವೆಲ್ಲಪಲ್ಲಿ ಕೇರಳದ ಬಿಜೆಪಿಯ ಮಿತ್ರಪಕ್ಷವಾದ ಬಿಡಿಜೆಎಸ್‌ನ ನಾಯಕರಾಗಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡ್‌ನಿಂದ ಸ್ಪರ್ಧಿಸಿದ್ದ ವೆಲ್ಲಪಲ್ಲಿ ಅವರ ಹೆಸರು, ಮೂವರು ಆರೋಪಿಗಳು ಟಿಆರ್‌ಎಸ್ ಶಾಸಕರೊಂದಿಗೆ ನಡೆಸಿದ ಸಂಭಾಷಣೆಯಲ್ಲಿ ಹೇಳಿಕೊಂಡಿದ್ದರು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಮನವಿಯನ್ನು ತೆಲಂಗಾಣ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿದೆ ಆದರೆ ಪ್ರಕರಣದ ತನಿಖೆಯನ್ನು ಏಕ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ತೀರ್ಪು ನೀಡಿತ್ತು. ತನಿಖೆಯ ಪ್ರಗತಿಯ ಕುರಿತು ನವೆಂಬರ್ 29 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಅದು ಎಸ್‌ಐಟಿಗೆ ಕೇಳಿದೆ.

ಇದನ್ನೂ ಓದಿ: ತೆಲಂಗಾಣ: ಬಿಜೆಪಿಯಿಂದ ಆಪರೇಷನ್‌ ಕಮಲಕ್ಕೆ ಯತ್ನ; ಕೇಂದ್ರ ಸಚಿವರ ಆಪ್ತ ಸೇರಿದಂತೆ ಮೂವರ ಬಂಧನ

ಈ ಮಧ್ಯೆ, ಮೂವರು ಆರೋಪಿಗಳನ್ನು ಒಂದು ವಾರ ಕಸ್ಟಡಿಗೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಶೇಷ ಎಸಿಬಿ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ. ಈ ಹಿಂದೆ ಆರೋಪಿಗಳನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಎಸ್‌ಐಟಿ, ಪ್ರಕರಣದಲ್ಲಿ ಭಾಗಿಯಾಗಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ಇನ್ನೊಂದು ವಾರ ಅವರ ಕಸ್ಟಡಿ ಅಗತ್ಯವಿದೆ ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...