Homeರಾಷ್ಟ್ರೀಯತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

ತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

- Advertisement -
- Advertisement -

ತನ್ನ 15 ವರ್ಷದ ಮಗಳು ಹುಡುಗನೊಬ್ಬನನ್ನು ಪ್ರೀತಿಸಿದ ಕಾರಣಕ್ಕೆ ಸ್ವಂತ ತಂದೆಯೇ ಬಾಲಕಿಯನ್ನು ಕಡಿದು ಕೊಂದಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಪಥಪಲ್ಲಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 25ರ ಮಂಗಳವಾರ ಮಧ್ಯಾಹ್ನ ಈ ಅಮಾನವೀಯ ಘಟನೆ ನಡೆದಿದೆ.

ಹತ್ಯೆಗೀಡಾದ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ ಆರ್‌‌. ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ರಾಜಶೇಖರ್‌ ಎಂದು ಗುರುತಿಸಲಾಗಿದೆ. ಬಾಲಕಿಯು ತನ್ನದೆ ಗ್ರಾಮದ ಹುಡುಗನನ್ನು ಪ್ರೀತಿಸುತ್ತಿದ್ದರು ಎಂದು ವರದಿಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯ ತಂದೆ ಹುಡುಗನ ವಿಚಾರದ ಬಗ್ಗೆ ಎಚ್ಚರಿಸಿದ್ದರು. ಆದರೂ ಹದಿಹರೆಯದ ಹುಡುಗ-ಹುಡುಗಿ ಸಂಪರ್ಕದಲ್ಲಿ ಇರುವುದನ್ನು ಕಂಡು ಕೋಪಗೊಂಡಿದ್ದಾರೆ. ಮಂಗಳವಾರದಂದು ರಾಜಶೇಖರ್ ತನ್ನ ಮಗಳು ಕುಟುಂಬಕ್ಕೆ ಕಳಂಕ ತಂದಿದ್ದಾಳೆ ಎಂದು ಆರೋಪಿಸಿ ಕಡಿದು ಕೊಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

“ಕೋಪದಲ್ಲಿ ರಾಜಶೇಖರ್‌ ತನ್ನ ಮಗಳನ್ನು ಹರಿತವಾದ ವಸ್ತುವಿನಿಂದ ಕಡಿದು ಕೊಂದಿದ್ದಾರೆ” ಎಂದು ವನಪರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಪೂರ್ವ‌ ತಿಳಿಸಿದ್ದಾರೆ.

ಕೆಲವು ಸುದ್ದಿವಾಹಿನಿಗಳು ಈ ಘಟನೆಯನ್ನು “ಮರ್ಯಾದಗೇಡು ಹತ್ಯೆ” ಪ್ರಕರಣವೆಂದು ವರದಿ ಮಾಡಿವೆ. ಜಾತಿಯ ಕಾರಣಕ್ಕೆ ಹತ್ಯೆಯಾಗಿದ್ದರೆ ಮರ್ಯಾದಗೇಡು ಹತ್ಯೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಸಂತ್ರಸ್ತೆ ಮತ್ತು ಹುಡುಗ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು ಎಂದು ಸ್ಪಷ್ಟಪಡಿಸಿದ್ದಾರೆ. “ಸಂತ್ರಸ್ತ ಬಾಲಕಿ ಮತ್ತು ಬಾಲಕ ಇಬ್ಬರೂ ಬೋಯ ಜಾತಿಗೆ ಸೇರಿದವರು. ಹಾಗಾಗಿ ಇದು ಜಾತಿ ಹತ್ಯೆ ಪ್ರಕರಣವಲ್ಲ” ಎಂದು ಡಿಎಸ್ಪಿ ಹೇಳಿದ್ದಾರೆ.

ಈ ಮಧ್ಯೆ, ಪೊಲೀಸರು ಆರೋಪಿ ರಾಜಶೇಖರ್‌ನನ್ನು ಬಂಧಿಸಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಜೂನ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಕೂಡಾ ಇದೇ ರೀತಿಯ ಅಪರಾಧ ನಡೆದಿತ್ತು. ದಲಿತ ಸಮುದಾಯದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ 17 ವರ್ಷದ ಮಗಳು ಶಾಲಿನಿಯನ್ನು ಅವರ ತಂದೆಯೆ ಕೊಂದು ಹಾಕಿದ್ದರು. ಮೇಲ್ಜಾತಿ ಸಮುದಾಯವೆಂದು ಪರಿಗಣಿಸಲ್ಪಟ್ಟಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆಕೆಯ ತಂದೆ ಸುರೇಶ್‌‌, ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಶಾಲಿನಿಯನ್ನು ಕೊಂದ ನಂತರ ಸುರೇಶ್ ಶವವನ್ನು ದಲಿತ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಶವವನ್ನು ಎಸೆದಿದ್ದರು.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಇದೇ ವರ್ಷ ಹೈದರಾಬಾದ್‌ನಲ್ಲಿ ಕೂಡಾ ಅಂತಹ ಘಟನೆ ನಡೆದಿತ್ತು. ಮುಸ್ಲಿಂ ಸಮುದಾಯದ ಯುವತಿಯನ್ನು ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ದಲಿತ ವ್ಯಕ್ತಿ ಬಿ. ನಾಗರಾಜು ಎಂಬ ಯುವಕನನ್ನು ನಗರದ ಸರೂರ್‌ನಗರದಲ್ಲಿ ಕೊಲ್ಲಲಾಗಿತ್ತು. ಈ ಘಟನೆ ಕೋಮುಗಲಭೆಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....