Homeರಾಷ್ಟ್ರೀಯತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

ತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

- Advertisement -
- Advertisement -

ತನ್ನ 15 ವರ್ಷದ ಮಗಳು ಹುಡುಗನೊಬ್ಬನನ್ನು ಪ್ರೀತಿಸಿದ ಕಾರಣಕ್ಕೆ ಸ್ವಂತ ತಂದೆಯೇ ಬಾಲಕಿಯನ್ನು ಕಡಿದು ಕೊಂದಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಪಥಪಲ್ಲಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 25ರ ಮಂಗಳವಾರ ಮಧ್ಯಾಹ್ನ ಈ ಅಮಾನವೀಯ ಘಟನೆ ನಡೆದಿದೆ.

ಹತ್ಯೆಗೀಡಾದ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ ಆರ್‌‌. ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ರಾಜಶೇಖರ್‌ ಎಂದು ಗುರುತಿಸಲಾಗಿದೆ. ಬಾಲಕಿಯು ತನ್ನದೆ ಗ್ರಾಮದ ಹುಡುಗನನ್ನು ಪ್ರೀತಿಸುತ್ತಿದ್ದರು ಎಂದು ವರದಿಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯ ತಂದೆ ಹುಡುಗನ ವಿಚಾರದ ಬಗ್ಗೆ ಎಚ್ಚರಿಸಿದ್ದರು. ಆದರೂ ಹದಿಹರೆಯದ ಹುಡುಗ-ಹುಡುಗಿ ಸಂಪರ್ಕದಲ್ಲಿ ಇರುವುದನ್ನು ಕಂಡು ಕೋಪಗೊಂಡಿದ್ದಾರೆ. ಮಂಗಳವಾರದಂದು ರಾಜಶೇಖರ್ ತನ್ನ ಮಗಳು ಕುಟುಂಬಕ್ಕೆ ಕಳಂಕ ತಂದಿದ್ದಾಳೆ ಎಂದು ಆರೋಪಿಸಿ ಕಡಿದು ಕೊಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

“ಕೋಪದಲ್ಲಿ ರಾಜಶೇಖರ್‌ ತನ್ನ ಮಗಳನ್ನು ಹರಿತವಾದ ವಸ್ತುವಿನಿಂದ ಕಡಿದು ಕೊಂದಿದ್ದಾರೆ” ಎಂದು ವನಪರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಪೂರ್ವ‌ ತಿಳಿಸಿದ್ದಾರೆ.

ಕೆಲವು ಸುದ್ದಿವಾಹಿನಿಗಳು ಈ ಘಟನೆಯನ್ನು “ಮರ್ಯಾದಗೇಡು ಹತ್ಯೆ” ಪ್ರಕರಣವೆಂದು ವರದಿ ಮಾಡಿವೆ. ಜಾತಿಯ ಕಾರಣಕ್ಕೆ ಹತ್ಯೆಯಾಗಿದ್ದರೆ ಮರ್ಯಾದಗೇಡು ಹತ್ಯೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಸಂತ್ರಸ್ತೆ ಮತ್ತು ಹುಡುಗ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು ಎಂದು ಸ್ಪಷ್ಟಪಡಿಸಿದ್ದಾರೆ. “ಸಂತ್ರಸ್ತ ಬಾಲಕಿ ಮತ್ತು ಬಾಲಕ ಇಬ್ಬರೂ ಬೋಯ ಜಾತಿಗೆ ಸೇರಿದವರು. ಹಾಗಾಗಿ ಇದು ಜಾತಿ ಹತ್ಯೆ ಪ್ರಕರಣವಲ್ಲ” ಎಂದು ಡಿಎಸ್ಪಿ ಹೇಳಿದ್ದಾರೆ.

ಈ ಮಧ್ಯೆ, ಪೊಲೀಸರು ಆರೋಪಿ ರಾಜಶೇಖರ್‌ನನ್ನು ಬಂಧಿಸಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಜೂನ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಕೂಡಾ ಇದೇ ರೀತಿಯ ಅಪರಾಧ ನಡೆದಿತ್ತು. ದಲಿತ ಸಮುದಾಯದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ 17 ವರ್ಷದ ಮಗಳು ಶಾಲಿನಿಯನ್ನು ಅವರ ತಂದೆಯೆ ಕೊಂದು ಹಾಕಿದ್ದರು. ಮೇಲ್ಜಾತಿ ಸಮುದಾಯವೆಂದು ಪರಿಗಣಿಸಲ್ಪಟ್ಟಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆಕೆಯ ತಂದೆ ಸುರೇಶ್‌‌, ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಶಾಲಿನಿಯನ್ನು ಕೊಂದ ನಂತರ ಸುರೇಶ್ ಶವವನ್ನು ದಲಿತ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಶವವನ್ನು ಎಸೆದಿದ್ದರು.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಇದೇ ವರ್ಷ ಹೈದರಾಬಾದ್‌ನಲ್ಲಿ ಕೂಡಾ ಅಂತಹ ಘಟನೆ ನಡೆದಿತ್ತು. ಮುಸ್ಲಿಂ ಸಮುದಾಯದ ಯುವತಿಯನ್ನು ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ದಲಿತ ವ್ಯಕ್ತಿ ಬಿ. ನಾಗರಾಜು ಎಂಬ ಯುವಕನನ್ನು ನಗರದ ಸರೂರ್‌ನಗರದಲ್ಲಿ ಕೊಲ್ಲಲಾಗಿತ್ತು. ಈ ಘಟನೆ ಕೋಮುಗಲಭೆಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....