Homeರಾಷ್ಟ್ರೀಯತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

ತೆಲಂಗಾಣ: ಪ್ರೀತಿಗೆ ವಿರೋಧ; ಹದಿಹರೆಯದ ಮಗಳನ್ನು ಕೊಂದ ತಂದೆ

- Advertisement -
- Advertisement -

ತನ್ನ 15 ವರ್ಷದ ಮಗಳು ಹುಡುಗನೊಬ್ಬನನ್ನು ಪ್ರೀತಿಸಿದ ಕಾರಣಕ್ಕೆ ಸ್ವಂತ ತಂದೆಯೇ ಬಾಲಕಿಯನ್ನು ಕಡಿದು ಕೊಂದಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯ ಪಥಪಲ್ಲಿ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 25ರ ಮಂಗಳವಾರ ಮಧ್ಯಾಹ್ನ ಈ ಅಮಾನವೀಯ ಘಟನೆ ನಡೆದಿದೆ.

ಹತ್ಯೆಗೀಡಾದ ಬಾಲಕಿಯನ್ನು 10 ನೇ ತರಗತಿಯ ವಿದ್ಯಾರ್ಥಿನಿ ಆರ್‌‌. ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ರಾಜಶೇಖರ್‌ ಎಂದು ಗುರುತಿಸಲಾಗಿದೆ. ಬಾಲಕಿಯು ತನ್ನದೆ ಗ್ರಾಮದ ಹುಡುಗನನ್ನು ಪ್ರೀತಿಸುತ್ತಿದ್ದರು ಎಂದು ವರದಿಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿಯ ತಂದೆ ಹುಡುಗನ ವಿಚಾರದ ಬಗ್ಗೆ ಎಚ್ಚರಿಸಿದ್ದರು. ಆದರೂ ಹದಿಹರೆಯದ ಹುಡುಗ-ಹುಡುಗಿ ಸಂಪರ್ಕದಲ್ಲಿ ಇರುವುದನ್ನು ಕಂಡು ಕೋಪಗೊಂಡಿದ್ದಾರೆ. ಮಂಗಳವಾರದಂದು ರಾಜಶೇಖರ್ ತನ್ನ ಮಗಳು ಕುಟುಂಬಕ್ಕೆ ಕಳಂಕ ತಂದಿದ್ದಾಳೆ ಎಂದು ಆರೋಪಿಸಿ ಕಡಿದು ಕೊಂದಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

“ಕೋಪದಲ್ಲಿ ರಾಜಶೇಖರ್‌ ತನ್ನ ಮಗಳನ್ನು ಹರಿತವಾದ ವಸ್ತುವಿನಿಂದ ಕಡಿದು ಕೊಂದಿದ್ದಾರೆ” ಎಂದು ವನಪರ್ತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಪೂರ್ವ‌ ತಿಳಿಸಿದ್ದಾರೆ.

ಕೆಲವು ಸುದ್ದಿವಾಹಿನಿಗಳು ಈ ಘಟನೆಯನ್ನು “ಮರ್ಯಾದಗೇಡು ಹತ್ಯೆ” ಪ್ರಕರಣವೆಂದು ವರದಿ ಮಾಡಿವೆ. ಜಾತಿಯ ಕಾರಣಕ್ಕೆ ಹತ್ಯೆಯಾಗಿದ್ದರೆ ಮರ್ಯಾದಗೇಡು ಹತ್ಯೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, ಸಂತ್ರಸ್ತೆ ಮತ್ತು ಹುಡುಗ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು ಎಂದು ಸ್ಪಷ್ಟಪಡಿಸಿದ್ದಾರೆ. “ಸಂತ್ರಸ್ತ ಬಾಲಕಿ ಮತ್ತು ಬಾಲಕ ಇಬ್ಬರೂ ಬೋಯ ಜಾತಿಗೆ ಸೇರಿದವರು. ಹಾಗಾಗಿ ಇದು ಜಾತಿ ಹತ್ಯೆ ಪ್ರಕರಣವಲ್ಲ” ಎಂದು ಡಿಎಸ್ಪಿ ಹೇಳಿದ್ದಾರೆ.

ಈ ಮಧ್ಯೆ, ಪೊಲೀಸರು ಆರೋಪಿ ರಾಜಶೇಖರ್‌ನನ್ನು ಬಂಧಿಸಿದ್ದು, ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

ಜೂನ್‌ ತಿಂಗಳಲ್ಲಿ ಕರ್ನಾಟಕದಲ್ಲಿ ಕೂಡಾ ಇದೇ ರೀತಿಯ ಅಪರಾಧ ನಡೆದಿತ್ತು. ದಲಿತ ಸಮುದಾಯದ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ 17 ವರ್ಷದ ಮಗಳು ಶಾಲಿನಿಯನ್ನು ಅವರ ತಂದೆಯೆ ಕೊಂದು ಹಾಕಿದ್ದರು. ಮೇಲ್ಜಾತಿ ಸಮುದಾಯವೆಂದು ಪರಿಗಣಿಸಲ್ಪಟ್ಟಿರುವ ಒಕ್ಕಲಿಗ ಸಮುದಾಯಕ್ಕೆ ಸೇರಿದ ಆಕೆಯ ತಂದೆ ಸುರೇಶ್‌‌, ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಶಾಲಿನಿಯನ್ನು ಕೊಂದ ನಂತರ ಸುರೇಶ್ ಶವವನ್ನು ದಲಿತ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಶವವನ್ನು ಎಸೆದಿದ್ದರು.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಇದೇ ವರ್ಷ ಹೈದರಾಬಾದ್‌ನಲ್ಲಿ ಕೂಡಾ ಅಂತಹ ಘಟನೆ ನಡೆದಿತ್ತು. ಮುಸ್ಲಿಂ ಸಮುದಾಯದ ಯುವತಿಯನ್ನು ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕಾಗಿ ದಲಿತ ವ್ಯಕ್ತಿ ಬಿ. ನಾಗರಾಜು ಎಂಬ ಯುವಕನನ್ನು ನಗರದ ಸರೂರ್‌ನಗರದಲ್ಲಿ ಕೊಲ್ಲಲಾಗಿತ್ತು. ಈ ಘಟನೆ ಕೋಮುಗಲಭೆಗೆ ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...