Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....