Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...