Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...