Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...