Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....