Homeಮುಖಪುಟತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

ತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಘಟಕದಲ್ಲಿ ಸೋಮವಾರ (ಜೂನ್.30) ಸಂಭವಿಸಿದ ರಿಯಾಕ್ಟರ್ ಸ್ಪೋಟದಲ್ಲಿ ಸಾವಿಗೀಡಾದವರ ಸಂಖ್ಯೆ 35 ದಾಟಿದೆ. ಕೆಲ ಮಾಧ್ಯಮಗಳು 42 ಜನರು ಸಾವನ್ನಪ್ಪಿರುವ ಬಗ್ಗೆ ವರದಿ ಮಾಡಿವೆ.

ರಾತ್ರಿಯಿಡೀ ಸ್ಥಳೀಯ ಪಟ್ಟಂಚೆರುವು ಆಸ್ಪತ್ರೆಗೆ ದುರಂತ ಸ್ಥಳದಿಂದ ಮೃತದೇಹಗಳು ಬರುತ್ತಿತ್ತು. ಆಸ್ಪತ್ರೆಯ ಅಧಿಕಾರಿಗಳು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ರಾತ್ರಿ ಭಾರೀ ಮಳೆಯಿಂದ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಅಡಚಣೆಯಾಯಿತು ಎಂದು ದಿ ಹಿಂದೂ ವರದಿ ಹೇಳಿದೆ.

ಮೃತದೇಹಗಳ ಡಿಎನ್‌ಎ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಲಾಗಿದೆ. ರಾತ್ರಿ ಸುಮಾರು 20 ಶವಗಳ ಡಿಎನ್‌ಎ ಸಂಗ್ರಹಿಸಲಾಗಿದೆ. ಅವುಗಳು ಮೃತರ ಸಂಬಂಧಿಕರೊಂದಿಗೆ ಹೊಂದಾಣಿಕೆಯಾದ ನಂತರ ಮೃತದೇಹಗಳನ್ನು ಹಸ್ತಾಂತರಿಸುತ್ತೇವೆ ಎಂದು ಪಟ್ಟಂಚೆರುವು ಪ್ರದೇಶ ಆಸ್ಪತ್ರೆಯ ಮೇಲ್ವಿಚಾರಕ ಡಾ. ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಮತ್ತು ಡಿಎನ್‌ಎ ಮಾದರಿ ಸಂಗ್ರಹಕ್ಕೆ ಸಹಾಯ ಮಾಡಲು ಉಸ್ಮಾನಿಯಾ ಜನರಲ್ ಆಸ್ಪತ್ರೆಯಿಂದ ವಿಶೇಷ ವಿಧಿವಿಜ್ಞಾನ ತಂಡವನ್ನು ಕರೆಸಲಾಗಿದೆ. ಇದುವರೆಗೆ 15 ಶವಗಳ ಶವಪರೀಕ್ಷೆ ಪೂರ್ಣಗೊಂಡಿದ್ದು, ಕೇವಲ ನಾಲ್ಕು ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳನ್ನು ಡಿಎನ್‌ಎ ಪ್ರೊಫೈಲಿಂಗ್‌ಗೆ ಒಳಪಡಿಸಲಾಗುತ್ತಿದೆ ಎಂದಿದ್ದಾರೆ.

ತೆಲಂಗಾಣ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ (ಡಿಎಂಇ) ಡಾ. ಎ. ನರೇಂದ್ರ ಕುಮಾರ್ ಮತ್ತು ತೆಲಂಗಾಣ ವೈದ್ಯ ವಿಧಾನ ಪರಿಷತ್ (ಟಿವಿವಿಪಿ) ಆಯುಕ್ತ ಡಾ. ಅಜಯ ಕುಮಾರ್ ಸೇರಿದಂತೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾತ್ರಿಯಿಡೀ ಆಸ್ಪತ್ರೆಯಲ್ಲಿ ಹಾಜರಿದ್ದರು. ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಂಗಾರೆಡ್ಡಿ ಜಿಲ್ಲೆಯ ಪಾಶಮಿಲರಾಮ್ ಕೈಗಾರಿಕಾ ಪ್ರದೇಶದ ಔಷಧೀಯ ಘಟಕ ಸಿಗಾಚಿ ಇಂಡಸ್ಟ್ರೀಸ್ ಪ್ರೈ. ಲಿಮಿಟೆಡ್‌ನಲ್ಲಿ ಸೋಮವಾರ (ಜೂ.30) ಬೆಳಿಗ್ಗೆ 9.30ರ ಸುಮಾರಿಗೆ ಸ್ಪೋಟ ಸಂಭವಿಸಿದೆ.

ಮೈಕ್ರೋಕ್ರಿಸ್ಟಲಿನ್ ಸೆಲ್ಯುಲೋಸ್ ಅನ್ನು ನಿರ್ವಹಿಸುವಾಗ ಸ್ಪ್ರೇ ಡ್ರೈಯರ್‌ನಲ್ಲಿ ಒತ್ತಡ ಹೆಚ್ಚಾದ ಕಾರಣ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಪೋಟದಿಂದ ಕಾರ್ಖಾನೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ 35 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ 34 ಜನರು ಗಾಯಗೊಂಡಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳನ್ನು ಒಳಗೊಂಡ ರಕ್ಷಣಾ ತಂಡಗಳ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಯಾರದರು ಕಾರ್ಮಿಕರು ಅಪಾಯದಲ್ಲಿ ಸಿಲುಕಿದ್ದಾರಾ? ಎಂದು ಪರಿಶೀಲಿಸಲಾಗುತ್ತಿದೆ, ಜೊತೆಗೆ ಮೃತದೇಹಗಳ ವಿಲೇವಾರಿ ನಡೆಯುತ್ತಿದೆ.

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...