Homeಮುಖಪುಟತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

ತೆಲಂಗಾಣ ಔ‍ಷಧ ಘಟಕದಲ್ಲಿ ಸ್ಪೋಟ ಪ್ರಕರಣ: 35 ದಾಟಿದ ಸಾವಿನ ಸಂಖ್ಯೆ

- Advertisement -
- Advertisement -

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಘಟಕದಲ್ಲಿ ಸೋಮವಾರ (ಜೂನ್.30) ಸಂಭವಿಸಿದ ರಿಯಾಕ್ಟರ್ ಸ್ಪೋಟದಲ್ಲಿ ಸಾವಿಗೀಡಾದವರ ಸಂಖ್ಯೆ 35 ದಾಟಿದೆ. ಕೆಲ ಮಾಧ್ಯಮಗಳು 42 ಜನರು ಸಾವನ್ನಪ್ಪಿರುವ ಬಗ್ಗೆ ವರದಿ ಮಾಡಿವೆ.

ರಾತ್ರಿಯಿಡೀ ಸ್ಥಳೀಯ ಪಟ್ಟಂಚೆರುವು ಆಸ್ಪತ್ರೆಗೆ ದುರಂತ ಸ್ಥಳದಿಂದ ಮೃತದೇಹಗಳು ಬರುತ್ತಿತ್ತು. ಆಸ್ಪತ್ರೆಯ ಅಧಿಕಾರಿಗಳು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ರಾತ್ರಿ ಭಾರೀ ಮಳೆಯಿಂದ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಅಡಚಣೆಯಾಯಿತು ಎಂದು ದಿ ಹಿಂದೂ ವರದಿ ಹೇಳಿದೆ.

ಮೃತದೇಹಗಳ ಡಿಎನ್‌ಎ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಿಸಲಾಗಿದೆ. ರಾತ್ರಿ ಸುಮಾರು 20 ಶವಗಳ ಡಿಎನ್‌ಎ ಸಂಗ್ರಹಿಸಲಾಗಿದೆ. ಅವುಗಳು ಮೃತರ ಸಂಬಂಧಿಕರೊಂದಿಗೆ ಹೊಂದಾಣಿಕೆಯಾದ ನಂತರ ಮೃತದೇಹಗಳನ್ನು ಹಸ್ತಾಂತರಿಸುತ್ತೇವೆ ಎಂದು ಪಟ್ಟಂಚೆರುವು ಪ್ರದೇಶ ಆಸ್ಪತ್ರೆಯ ಮೇಲ್ವಿಚಾರಕ ಡಾ. ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಮತ್ತು ಡಿಎನ್‌ಎ ಮಾದರಿ ಸಂಗ್ರಹಕ್ಕೆ ಸಹಾಯ ಮಾಡಲು ಉಸ್ಮಾನಿಯಾ ಜನರಲ್ ಆಸ್ಪತ್ರೆಯಿಂದ ವಿಶೇಷ ವಿಧಿವಿಜ್ಞಾನ ತಂಡವನ್ನು ಕರೆಸಲಾಗಿದೆ. ಇದುವರೆಗೆ 15 ಶವಗಳ ಶವಪರೀಕ್ಷೆ ಪೂರ್ಣಗೊಂಡಿದ್ದು, ಕೇವಲ ನಾಲ್ಕು ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳನ್ನು ಡಿಎನ್‌ಎ ಪ್ರೊಫೈಲಿಂಗ್‌ಗೆ ಒಳಪಡಿಸಲಾಗುತ್ತಿದೆ ಎಂದಿದ್ದಾರೆ.

ತೆಲಂಗಾಣ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ (ಡಿಎಂಇ) ಡಾ. ಎ. ನರೇಂದ್ರ ಕುಮಾರ್ ಮತ್ತು ತೆಲಂಗಾಣ ವೈದ್ಯ ವಿಧಾನ ಪರಿಷತ್ (ಟಿವಿವಿಪಿ) ಆಯುಕ್ತ ಡಾ. ಅಜಯ ಕುಮಾರ್ ಸೇರಿದಂತೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾತ್ರಿಯಿಡೀ ಆಸ್ಪತ್ರೆಯಲ್ಲಿ ಹಾಜರಿದ್ದರು. ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಂಗಾರೆಡ್ಡಿ ಜಿಲ್ಲೆಯ ಪಾಶಮಿಲರಾಮ್ ಕೈಗಾರಿಕಾ ಪ್ರದೇಶದ ಔಷಧೀಯ ಘಟಕ ಸಿಗಾಚಿ ಇಂಡಸ್ಟ್ರೀಸ್ ಪ್ರೈ. ಲಿಮಿಟೆಡ್‌ನಲ್ಲಿ ಸೋಮವಾರ (ಜೂ.30) ಬೆಳಿಗ್ಗೆ 9.30ರ ಸುಮಾರಿಗೆ ಸ್ಪೋಟ ಸಂಭವಿಸಿದೆ.

ಮೈಕ್ರೋಕ್ರಿಸ್ಟಲಿನ್ ಸೆಲ್ಯುಲೋಸ್ ಅನ್ನು ನಿರ್ವಹಿಸುವಾಗ ಸ್ಪ್ರೇ ಡ್ರೈಯರ್‌ನಲ್ಲಿ ಒತ್ತಡ ಹೆಚ್ಚಾದ ಕಾರಣ ಸ್ಫೋಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಪೋಟದಿಂದ ಕಾರ್ಖಾನೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ 35 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ 34 ಜನರು ಗಾಯಗೊಂಡಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳಗಳನ್ನು ಒಳಗೊಂಡ ರಕ್ಷಣಾ ತಂಡಗಳ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಯಾರದರು ಕಾರ್ಮಿಕರು ಅಪಾಯದಲ್ಲಿ ಸಿಲುಕಿದ್ದಾರಾ? ಎಂದು ಪರಿಶೀಲಿಸಲಾಗುತ್ತಿದೆ, ಜೊತೆಗೆ ಮೃತದೇಹಗಳ ವಿಲೇವಾರಿ ನಡೆಯುತ್ತಿದೆ.

ಹಿರಿಯ ಅಧಿಕಾರಿಯನ್ನು ಕಚೇರಿಯಿಂದ ಎಳೆದೊಯ್ದು ಥಳಿಸಿದ ದುಷ್ಕರ್ಮಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...