Homeಮುಖಪುಟರೋಹಿತ್ ವೇಮುಲಾ 'ಪರಿಶಿಷ್ಟ ಜಾತಿ'ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

ರೋಹಿತ್ ವೇಮುಲಾ ‘ಪರಿಶಿಷ್ಟ ಜಾತಿ’ಗೆ ಸೇರಿದವರಲ್ಲ: ಪ್ರಕರಣದ ಫೈಲ್ ಕ್ಲೋಸ್ ಮಾಡಿದ ಪೊಲೀಸರು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ.

ಮೇ 3ರಂದು ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆ ನಡೆಯಲಿದೆ. ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಚ್ಚರಿ ಎಂದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕು ತಿಂಗಳ ಬಳಿಕ ಈ ವರದಿ ಬಂದಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಮೇ 13ರಂದು ತೆಲಂಗಾಣ ಮತದಾನಕ್ಕೆ ಸಿದ್ದವಾಗುತ್ತಿದ್ದು, ಮತದಾನಕ್ಕೆ ಕೇವಲ 10 ದಿನಗಳ ಮೊದಲು ವರದಿಯನ್ನು ಬಿಡುಗಡೆ ಮಾಡಲಾಗಿದೆ. 2016ರಲ್ಲಿ ‘ಜಸ್ಟೀಸ್ ಫಾರ್ ವೇಮುಲಾ ಅಭಿಯಾನ’ಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರೋಹಿತ್ ವೇಮುಲಾ ಆಕ್ಟ್ ಎಂಬ ಕಾನೂನನ್ನು ರಚಿಸುವುದಾಗಿ ಭರವಸೆ ನೀಡಿದ್ದರು. ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಅಲ್ಪಸಂಖ್ಯಾತರಿಗೆ “ಶಿಕ್ಷಣ ಮತ್ತು ಘನತೆಯ ಹಕ್ಕನ್ನು ಕಾಪಾಡಲು” ಜಾರಿಗೊಳಿಸುವುದಾಗಿ ಹೇಳಿದ್ದರು. ಇತ್ತೀಚಿನ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ಕಾಂಗ್ರೆಸ್ ಸೇರಲು ಆಹ್ವಾನಿಸಿದ್ದರು.

ತೆಲಂಗಾಣ ಕಾಂಗ್ರೆಸ್ ಅಥವಾ ಕೇಂದ್ರದ ನಾಯಕರು ಪ್ರಕರಣವನ್ನು ಮುಚ್ಚುವ ವರದಿಗೆ ಸಂಬಂಧಿಸಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಎಸ್‌ಎ) ಮುಖಂಡರು ಮತ್ತು ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ಸೇರಿದಂತೆ ಅವರ ಸಂಬಂಧಿಕರನ್ನು ಸಂಪರ್ಕಿಸಿದಾಗ ಶುಕ್ರವಾರ ನ್ಯಾಯಾಲಯದ ವಿಚಾರಣೆಯವರೆಗೂ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಪ್ರಾಥಮಿಕವಾಗಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು SC/ST ದೌರ್ಜನ್ಯ ತಡೆ (POA) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಿಸಲಾಗಿದೆ, ಮುಚ್ಚುವಿಕೆಯ ವರದಿಯು ವೇಮುಲನ ಜಾತಿಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತದೆಯೇ ಹೊರತು ಆತ್ಮಹತ್ಯೆಗೆ ಕಾರಣಗಳಲ್ಲ, ಅವರ ಆತ್ಮಹತ್ಯೆಗೆ ಯಾರೂ ಕಾರಣರಾಗಿರುವ ಬಗ್ಗೆ ಪುರವೆಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಯು ರೋಹಿತ್‌, ತಾನು ಪರಿಶಿಷ್ಟ ಜಾತಿಗೆ ಸೇರಿದವನಲ್ಲ ಎಂದು ತಿಳಿದಿದ್ದನು ಮತ್ತು ಅವನ ತಾಯಿ ಅವನಿಗೆ ಎಸ್‌ಸಿ ಪ್ರಮಾಣಪತ್ರವನ್ನು ಪಡೆದಿದ್ದರು ಎಂದು ಹೇಳುತ್ತದೆ. ಇದು ರೋಹಿತ್‌ನಲ್ಲಿ ನಿರಂತರವಾಗಿದ್ದ ಭಯದಲ್ಲಿ ಒಂದಾಗಿರಬಹುದು, ಏಕೆಂದರೆ ಇದು ಬಹಿರಂಗಗೊಂಡರೆ ಆತ ಕಾನೂನು ಕ್ರಮ ಎದುರಿಸುವ ಭೀತಿಯಲ್ಲಿದ್ದ ಎಂದು ಉಲ್ಲೇಖಿಸಲಾಗಿದೆ.

ರಾಧಿಕಾ ವೇಮುಲಾ ಅವರು ಎಸ್‌ಸಿ ಮಾಲಾ ಜಾತಿಗೆ ಸೇರಿದವರು ಮತ್ತು ತಮ್ಮ ಬಾಲ್ಯದಿಂದಲೂ ವಡ್ಡರ ಒಬಿಸಿ ಕುಟುಂಬದಲ್ಲಿ ಮನೆ ಸಹಾಯಕರಾಗಿ ಬೆಳೆದರು. ರೋಹಿತ್ ಅವರ ತಂದೆ ಮಣಿಕುಮಾರ್ ಕೂಡ ವಡ್ಡರ ಸಮುದಾಯಕ್ಕೆ ಸೇರಿದವರಾಗಿದ್ದರು.

ವರದಿಯ ಪ್ರಕಾರ, ರೋಹಿತ್ ಸ್ವಯಂ ಸಮಸ್ಯೆಗಳನ್ನು ಹೊಂದಿದ್ದ ಎಂದು ಹೇಳಲಾಗಿದೆ. ರೋಹಿತ್‌ ಅತ್ಯುತ್ತಮ ಶೈಕ್ಷಣಿಕ ಸಾಧನೆಯ ಹೊರತಾಗಿಯೂ, ಅಧ್ಯಯನಕ್ಕಿಂತ ಕ್ಯಾಂಪಸ್‌ನಲ್ಲಿ ರಾಜಕೀಯ ವಿಷಯಗಳಲ್ಲಿ ಹೆಚ್ಚು ತೊಡಗಿಸಿಕೊಂಡಿರುವಂತೆ ತೋರುತ್ತಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯದ ನಿರ್ಧಾರದಿಂದ ಅವರು ಕೋಪಗೊಂಡಿದ್ದರೆ, ಅವರು ಖಂಡಿತವಾಗಿಯೂ ನಿರ್ದಿಷ್ಟ ಪದಗಳಲ್ಲಿ ಬರೆಯುತ್ತಿದ್ದರು. ಆದರೆ ಅವರು ಹಾಗೆ ಮಾಡಲಿಲ್ಲ. ರೋಹಿತ್ ಸಾವಿಗೆ ಆ ಸಮಯದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಚಾಲ್ತಿಯಲ್ಲಿರುವ ಸನ್ನಿವೇಶಗಳು ಕಾರಣವಲ್ಲ ಎಂದು ಎಂದು ವರದಿಯಲ್ಲಿ ಹೇಳಲಾಗಿದೆ.

ರೋಹಿತ್ ಅವರ ತಾಯಿ ರಾಧಿಕಾ ವೇಮುಲಾ ಅವರನ್ನು ವಿಚಾರಣೆ ನಡೆಸುವಾಗ ತನಿಖಾ ಅಧಿಕಾರಿ (ಐಒ)  ಜಾತಿಯ ಬಗ್ಗೆ ನಿರ್ಧರಿಸಲು ಕುಟುಂಬದ ಸದಸ್ಯರ ಮಾದರಿಗಳೊಂದಿಗೆ ಡಿಎನ್‌ಎ ಪರೀಕ್ಷೆಗೆ ಒಳಗಾಗಲು ಸಿದ್ಧರಿದ್ದೀರಾ ಎಂದು ಕೇಳಿದಾಗ ಅವರು ‘ಮೌನವಾಗಿದ್ದರು’ ಎಂದು ಉಲ್ಲೇಖಿಸಲಾಗಿದೆ. ಇದಲ್ಲದೆ ರೋಹಿತ್ ಮತ್ತು ಇತರ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್(ASA) ನಾಯಕರನ್ನು ಹಾಸ್ಟೆಲ್‌ಗಳಿಂದ ಹೊರಹಾಕಿರುವ ನಿರ್ಧಾರ ವಿಶ್ವವಿದ್ಯಾಲಯದ ಶಿಸ್ತಿನ ನಿಯಮಗಳಲ್ಲಿ ಸೂಚಿಸಲಾದ ಶಿಕ್ಷೆಗಳಲ್ಲಿ ಒಂದಾಗಿದೆ ಎಂದು ವರದಿಯು ವಾದಿಸುತ್ತದೆ.

ಇದನ್ನು ಓದಿ: ಪ್ಯಾಲೆಸ್ತೀನ್‌ ಪರ, ಮೋದಿ ವಿರುದ್ಧದ ಪೋಸ್ಟ್‌ಗೆ ಲೈಕ್‌ ಹಾಕಿದ ಪ್ರಾಂಶುಪಾಲೆಗೆ ರಾಜೀನಾಮೆ ನೀಡುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...