Homeಮುಖಪುಟಹೈದರಾಬಾದ್ | ಹುತಾತ್ಮರ ಸ್ಮಾರಕದಲ್ಲಿ ಪ್ರೊ. ಸಾಯಿಬಾಬಾ ಪಾರ್ಥಿವ ಶರೀರ ಇರಿಸಲು ಪೊಲೀಸರಿಂದ ಅಡ್ಡಿ

ಹೈದರಾಬಾದ್ | ಹುತಾತ್ಮರ ಸ್ಮಾರಕದಲ್ಲಿ ಪ್ರೊ. ಸಾಯಿಬಾಬಾ ಪಾರ್ಥಿವ ಶರೀರ ಇರಿಸಲು ಪೊಲೀಸರಿಂದ ಅಡ್ಡಿ

- Advertisement -
- Advertisement -

ಹೈದರಾಬಾದ್‌ನ ಗನ್ ಪಾರ್ಕ್‌ನಲ್ಲಿರುವ ತೆಲಂಗಾಣ ಹುತಾತ್ಮರ ಸ್ಮಾರಕದ ಆವರಣದಲ್ಲಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಇರಿಸಲು ತೆಲಂಗಾಣ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಸಾಯಿಬಾಬಾ ಅವರ ಕುಟುಂಬ ಸದಸ್ಯರು ಮತ್ತು ಹೋರಾಟಗಾರರು ಪಟ್ಟುಹಿಡಿದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ, ಸಾಯಿಬಾಬಾ ಅವರ ದೇಹ ಹೊತ್ತ ಆಂಬ್ಯುಲೆನ್ಸ್ ಅನ್ನು ಗನ್ ಪಾರ್ಕ್‌ನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇರಿಸಲಾಯಿತು.

“ಹುತಾತ್ಮರ ಸ್ಮಾರಕದ ಒಳಗೆ ಯಾವುದೇ ಮೃತದೇಹಗಳನ್ನು ಇರಿಸಲು ಅನುಮತಿಸುವುದಿಲ್ಲ ಎಂದು ಪೊಲೀಸರು ನಮಗೆ ತಿಳಿಸಿರಲಿಲ್ಲ. ತೆಲಂಗಾಣ ಚಳವಳಿಗೆ ಸಾಯಿಬಾಬಾ ಅವರು ನೀಡಿದ ಕೊಡುಗೆಗಾಗಿ ನಾವು ಅವರಿಗೆ ಗೌರವ ಸಲ್ಲಿಸಲು ಬಯಸಿದ್ದೆವು” ಎಂದು ದಮನ ವಿರೋಧಿ ವೇದಿಕೆಯ ಸಂಚಾಲಕ ಕೆ ರವಿಚಂದರ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹುತಾತ್ಮರ ಸ್ಮಾರಕದಲ್ಲಿ ಸಾಯಿಬಾಬಾ ಅವರ ಪಾರ್ಥಿವ ಶರೀರ ಇರಿಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

“ರಾಹುಲ್ ಗಾಂಧಿಯವರೇ ನೀವು ಜನರನ್ನು ಮರುಳು ಮಾಡುತ್ತಿರುವ ‘ಮೊಹಬ್ಬತ್ ಕಿ ದುಕಾನ್’ ಇದೆನಾ? ನಾಚಿಕೆಗೇಡಿನ ದ್ವಂದ್ವ ನೀತಿ! ನಿಮ್ಮ ಪಕ್ಷದ ರೇವಂತ್ ರೆಡ್ಡಿ ಅವರ ಸೂಚನೆ ಮೇರೆಗೆ ತೆಲಂಗಾಣ ಪೊಲೀಸರು ಪ್ರೊಫೆಸರ್ ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನಲ್ಲಿರುವ ತೆಲಂಗಾಣ ಹುತಾತ್ಮರ ಸ್ಮಾರಕದಲ್ಲಿ ಇಡುವುದನ್ನು ತಡೆದಿದ್ದಾರೆ” ಎಂದು ತೆಲಂಗಾಣ ಮಾಜಿ ಡಿಜಿಟಲ್ ಮೀಡಿಯಾ ನಿರ್ದೇಶಕ ಕೊನಾಥಮ್ ದಿಲೀಪ್ ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

“ಸಾಯಿಬಾಬಾ ಅವರ ಕುಟುಂಬ ಸದಸ್ಯರು, ನಾಗರಿಕ ಸಮಾಜದ ಮುಖಂಡರು ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತರು ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲೇ ಸಾಯಿಬಾಬಾ ಅವರ ಪಾರ್ಥಿವ ಶರೀರ ಇಟ್ಟು ಗೌರವ ಸಲ್ಲಿಸಲಾಯಿತು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದಾಗ ಸಾಯಿಬಾಬಾ ಅವರ ದೇಹವನ್ನು ಗನ್ ಪಾರ್ಕ್‌ನಿಂದ ಮೌಲಾ ಅಲಿಯಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು” ಎಂದು ದಿಲೀಪ್ ತಿಳಿಸಿದ್ದಾರೆ.

 

ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ, ಮಾನವಹಕ್ಕುಗಳ ಹೋರಾಟಗಾರ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರು ಹೈದರಾಬಾದ್‌ನ ನಿಝಾಮ್‌ ವೈದ್ಯಕೀಯ ವಿಜ್ಞಾನ ಆಸ್ಪತ್ರೆ (ನಿಮ್ಸ್‌)ಯಲ್ಲಿ ಶನಿವಾರ ನಿಧನರಾಗಿದ್ದಾರೆ. ಹೃದಯ ಸ್ತಂಭನಕ್ಕೆ ಒಳಗಾಗಿದ್ದ ಅವರು ರಾತ್ರಿ 8.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

ಸಾಯಿಬಾಬಾ ಅವರ ದೇಹವನ್ನು ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಸರ್ಕಾರಿ ಗಾಂಧಿ ಆಸ್ಪತ್ರೆಗೆ ಹಸ್ತಾಂತರಿಸಲು ಅವರ ಕುಟುಂಬ ನಿರ್ಧರಿಸಿದೆ.

ಮಾವೋವಾದಿಗಳೊಂದಿಗೆ ಸಂಪರ್ಕ ಪ್ರಕರಣದಲ್ಲಿ ಸಾಯಿಬಾಬಾ ಮತ್ತು ಇತರ ಐವರಿಗೆ ಶಿಕ್ಷೆಯನ್ನು ರದ್ದುಗೊಳಿಸಿ ಕಳೆದ ಮಾರ್ಚ್‌ನಲ್ಲಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ತೀರ್ಪು ನೀಡಿತ್ತು.

ಇದನ್ನೂ ಓದಿ : ಪ್ರೊ. ಜಿಎನ್ ಸಾಯಿಬಾಬಾ ಅವರ ಇಚ್ಛೆಯಂತೆ ಆಸ್ಪತ್ರೆಗೆ ದೇಹದಾನ ಮಾಡಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...