Homeಚಳವಳಿದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

- Advertisement -
- Advertisement -

ದಲಿತ ಮಹಿಳೆ ಅಂಬಾದಿಪುದಿ ಮರಿಯಮ್ಮ ಅವರ ಲಾಕಪ್‌  ಡೆತ್‌ಗೆ ಸಂಬಂಧಿಸಿದಂತೆ ಈ ಹಿಂದೆ ಅಮಾನತುಗೊಂಡಿದ್ದ ಮೂವರು ತೆಲಂಗಾಣ ಪೊಲೀಸ್ ಸಿಬ್ಬಂದಿಯನ್ನು ಈಗ ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಲಾಗಿದೆ.

ಅಡಗುದೂರ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿಯೇ ದಲಿತ ಮಹಿಳೆ ಮರಿಯಮ್ಮ ಸಾವನ್ನಪ್ಪಿದ್ದರು. ಪೊಲೀಸ್ ಠಾಣೆಯಲ್ಲಿ  ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಮತ್ತು ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಎಂ.ಎ.ರಶೀದ್ ಪಟೇಲ್ ಮತ್ತು ಪಿ.ಜನಯ್ಯ ಅವರನ್ನು ಜುಲೈ 20 ರ ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಾಗವತ್ ಹೇಳಿದ್ದಾರೆ.

ಖಮ್ಮಂ ಜಿಲ್ಲೆಯ ಚಿಂತಕಣಿ ಮೂಲದ ಮರಿಯಮ್ಮ (45) ಯಾದಾದ್ರಿ ಜಿಲ್ಲೆಯ ಅಡಗುದೂರಿನಲ್ಲಿರುವ ಪಾದ್ರಿಯ ಮನೆಯಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿದ್ದರು. ಜೂನ್ 15 ರಂದು 2 ಲಕ್ಷ ರೂ. ಕಳ್ಳತನ ಮಾಡಿದ್ದರೆಂದು ಆರೋಪಿಸಿ ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಆಕೆಯ ಮಗ ಉದಯ್ ಕಿರಣ್ ಮತ್ತು ಅವನ ಸ್ನೇಹಿತನೊಂದಿಗೆ ಯಾದಾದ್ರಿ ಭೋಂಗೀರ್ ಜಿಲ್ಲೆಯ ಪೊಲೀಸ್ ಠಾಣೆಗೆ ಕರೆತರಲಾಗಿತ್ತು.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ಎರಡು ದಿನಗಳ ನಂತರ ಮರಿಯಮ್ಮನನ್ನು ಬಂಧಿಸಲಾಗಿತ್ತು. ತಾಯಿಯೊಂದಿಗೆ ಬಂಧನಕ್ಕೊಳಗಾಗಿದ್ದ ಮಗ, ಇಬ್ಬರಿಗೂ ತೀವ್ರವಾಗಿ ಥಳಿಸಲಾಗಿತ್ತು ಎಂದು ಹೇಳಿದ್ದಾರೆ.

“ಪೊಲೀಸರು ನನ್ನ ತಾಯಿಯ ಹೊಟ್ಟೆಗೆ ಬೂಟು ಕಾಲುಗಳಿಂದ ಒದೆಯುತ್ತಿದ್ದರು. ನೋವನ್ನು ಸಹಿಸಲಾಗದೆ ಆಕೆ ಅಲ್ಲಿಯೇ ಮೂತ್ರ ವಿಸರ್ಜಿಸಿದ್ದರು. ನಂತರ ಆಕೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಳಿಗ್ಗೆ 9.30 ಕ್ಕೆ ಆಕೆಯನ್ನು ಪೊಲೀಸರು ಮತ್ತೆ ಎಬ್ಬಿಸಲು ನೋಡಿದಾಗ, ಆಕೆ ನನ್ನ ಮಡಿಲಲ್ಲಿ ಸಾವನ್ನಪ್ಪಿದರು” ಎಂದು ಮಗ ಆರೋಪಿಸಿದ್ದಾನೆ. ಉದಯ್ ಕಿರಣ್  ಕೂಡ ಗಾಯಗಳಿಮದ ಬಳಲುತ್ತಿದ್ದು, ಖಮ್ಮಂ ಜನರಲ್ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಲಾಕಪ್‌ ಡೆತ್ ಘಟನೆಯ ಬಗ್ಗೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (SHRC) ರಾಚಕೊಂಡ ಪೊಲೀಸ್ ಆಯುಕ್ತರಿಂದ ವಿವರವಾದ ವಿಚಾರಣೆಗೆ ಆದೇಶ ನೀಡಿತ್ತು. ಈ ಘಟನೆಯ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (NCSC) ತೆಲಂಗಾಣ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಜೂನ್ 25 ರಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮರಿಯಮ್ಮ ಅವರ ಸಾವಿನ ಬಗ್ಗೆ ತನಿಖೆ ಆರಂಭಿಸುವಂತೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮಹೇಂದರ್ ರೆಡ್ಡಿ ಅವರಿಗೆ ನಿರ್ದೇಶನ ನೀಡಿದ್ದರು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸೇವೆಗಳಿಂದ ತೆಗೆದುಹಾಕುವಂತೆ ಡಿಜಿಪಿಗೆ ಸೂಚಿಸಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಲಾಕಪ್‌ ಡೇತ್‌ಗೆ ಬಲಿಯಾದ ಮೃತ ಅಂಬಾದಿಪುದಿ ಮರಿಯಮ್ಮ ಕುಟುಂಬಕ್ಕೆ 35 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಗವತ್ ಅವರು ಸಂವಿಧಾನದ 311 (2) (ಬಿ) ಮತ್ತು ಸಂವಿಧಾನದ 311 (2) (ಬಿ) ಮತ್ತು 25 (2) ನಡವಳಿಕೆಯ ನಿಯಮಗಳ ಅಡಿಯಲ್ಲಿ ಮಂಗಳವಾರ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಸೇರಿ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...