Homeಚಳವಳಿದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

- Advertisement -
- Advertisement -

ದಲಿತ ಮಹಿಳೆ ಅಂಬಾದಿಪುದಿ ಮರಿಯಮ್ಮ ಅವರ ಲಾಕಪ್‌  ಡೆತ್‌ಗೆ ಸಂಬಂಧಿಸಿದಂತೆ ಈ ಹಿಂದೆ ಅಮಾನತುಗೊಂಡಿದ್ದ ಮೂವರು ತೆಲಂಗಾಣ ಪೊಲೀಸ್ ಸಿಬ್ಬಂದಿಯನ್ನು ಈಗ ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಲಾಗಿದೆ.

ಅಡಗುದೂರ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿಯೇ ದಲಿತ ಮಹಿಳೆ ಮರಿಯಮ್ಮ ಸಾವನ್ನಪ್ಪಿದ್ದರು. ಪೊಲೀಸ್ ಠಾಣೆಯಲ್ಲಿ  ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಮತ್ತು ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಎಂ.ಎ.ರಶೀದ್ ಪಟೇಲ್ ಮತ್ತು ಪಿ.ಜನಯ್ಯ ಅವರನ್ನು ಜುಲೈ 20 ರ ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಾಗವತ್ ಹೇಳಿದ್ದಾರೆ.

ಖಮ್ಮಂ ಜಿಲ್ಲೆಯ ಚಿಂತಕಣಿ ಮೂಲದ ಮರಿಯಮ್ಮ (45) ಯಾದಾದ್ರಿ ಜಿಲ್ಲೆಯ ಅಡಗುದೂರಿನಲ್ಲಿರುವ ಪಾದ್ರಿಯ ಮನೆಯಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿದ್ದರು. ಜೂನ್ 15 ರಂದು 2 ಲಕ್ಷ ರೂ. ಕಳ್ಳತನ ಮಾಡಿದ್ದರೆಂದು ಆರೋಪಿಸಿ ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಆಕೆಯ ಮಗ ಉದಯ್ ಕಿರಣ್ ಮತ್ತು ಅವನ ಸ್ನೇಹಿತನೊಂದಿಗೆ ಯಾದಾದ್ರಿ ಭೋಂಗೀರ್ ಜಿಲ್ಲೆಯ ಪೊಲೀಸ್ ಠಾಣೆಗೆ ಕರೆತರಲಾಗಿತ್ತು.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ಎರಡು ದಿನಗಳ ನಂತರ ಮರಿಯಮ್ಮನನ್ನು ಬಂಧಿಸಲಾಗಿತ್ತು. ತಾಯಿಯೊಂದಿಗೆ ಬಂಧನಕ್ಕೊಳಗಾಗಿದ್ದ ಮಗ, ಇಬ್ಬರಿಗೂ ತೀವ್ರವಾಗಿ ಥಳಿಸಲಾಗಿತ್ತು ಎಂದು ಹೇಳಿದ್ದಾರೆ.

“ಪೊಲೀಸರು ನನ್ನ ತಾಯಿಯ ಹೊಟ್ಟೆಗೆ ಬೂಟು ಕಾಲುಗಳಿಂದ ಒದೆಯುತ್ತಿದ್ದರು. ನೋವನ್ನು ಸಹಿಸಲಾಗದೆ ಆಕೆ ಅಲ್ಲಿಯೇ ಮೂತ್ರ ವಿಸರ್ಜಿಸಿದ್ದರು. ನಂತರ ಆಕೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಳಿಗ್ಗೆ 9.30 ಕ್ಕೆ ಆಕೆಯನ್ನು ಪೊಲೀಸರು ಮತ್ತೆ ಎಬ್ಬಿಸಲು ನೋಡಿದಾಗ, ಆಕೆ ನನ್ನ ಮಡಿಲಲ್ಲಿ ಸಾವನ್ನಪ್ಪಿದರು” ಎಂದು ಮಗ ಆರೋಪಿಸಿದ್ದಾನೆ. ಉದಯ್ ಕಿರಣ್  ಕೂಡ ಗಾಯಗಳಿಮದ ಬಳಲುತ್ತಿದ್ದು, ಖಮ್ಮಂ ಜನರಲ್ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಲಾಕಪ್‌ ಡೆತ್ ಘಟನೆಯ ಬಗ್ಗೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (SHRC) ರಾಚಕೊಂಡ ಪೊಲೀಸ್ ಆಯುಕ್ತರಿಂದ ವಿವರವಾದ ವಿಚಾರಣೆಗೆ ಆದೇಶ ನೀಡಿತ್ತು. ಈ ಘಟನೆಯ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (NCSC) ತೆಲಂಗಾಣ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಜೂನ್ 25 ರಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮರಿಯಮ್ಮ ಅವರ ಸಾವಿನ ಬಗ್ಗೆ ತನಿಖೆ ಆರಂಭಿಸುವಂತೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮಹೇಂದರ್ ರೆಡ್ಡಿ ಅವರಿಗೆ ನಿರ್ದೇಶನ ನೀಡಿದ್ದರು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸೇವೆಗಳಿಂದ ತೆಗೆದುಹಾಕುವಂತೆ ಡಿಜಿಪಿಗೆ ಸೂಚಿಸಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಲಾಕಪ್‌ ಡೇತ್‌ಗೆ ಬಲಿಯಾದ ಮೃತ ಅಂಬಾದಿಪುದಿ ಮರಿಯಮ್ಮ ಕುಟುಂಬಕ್ಕೆ 35 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಗವತ್ ಅವರು ಸಂವಿಧಾನದ 311 (2) (ಬಿ) ಮತ್ತು ಸಂವಿಧಾನದ 311 (2) (ಬಿ) ಮತ್ತು 25 (2) ನಡವಳಿಕೆಯ ನಿಯಮಗಳ ಅಡಿಯಲ್ಲಿ ಮಂಗಳವಾರ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಸೇರಿ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...