Homeಚಳವಳಿದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

ದಲಿತ ಮಹಿಳೆಯ ಲಾಕಪ್‌ ಡೆತ್: ಮೂವರು ಪೊಲೀಸರು ಸೇವೆಯಿಂದ ವಜಾ

- Advertisement -
- Advertisement -

ದಲಿತ ಮಹಿಳೆ ಅಂಬಾದಿಪುದಿ ಮರಿಯಮ್ಮ ಅವರ ಲಾಕಪ್‌  ಡೆತ್‌ಗೆ ಸಂಬಂಧಿಸಿದಂತೆ ಈ ಹಿಂದೆ ಅಮಾನತುಗೊಂಡಿದ್ದ ಮೂವರು ತೆಲಂಗಾಣ ಪೊಲೀಸ್ ಸಿಬ್ಬಂದಿಯನ್ನು ಈಗ ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಲಾಗಿದೆ.

ಅಡಗುದೂರ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿಯೇ ದಲಿತ ಮಹಿಳೆ ಮರಿಯಮ್ಮ ಸಾವನ್ನಪ್ಪಿದ್ದರು. ಪೊಲೀಸ್ ಠಾಣೆಯಲ್ಲಿ  ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಮತ್ತು ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ಎಂ.ಎ.ರಶೀದ್ ಪಟೇಲ್ ಮತ್ತು ಪಿ.ಜನಯ್ಯ ಅವರನ್ನು ಜುಲೈ 20 ರ ಮಂಗಳವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಾಗವತ್ ಹೇಳಿದ್ದಾರೆ.

ಖಮ್ಮಂ ಜಿಲ್ಲೆಯ ಚಿಂತಕಣಿ ಮೂಲದ ಮರಿಯಮ್ಮ (45) ಯಾದಾದ್ರಿ ಜಿಲ್ಲೆಯ ಅಡಗುದೂರಿನಲ್ಲಿರುವ ಪಾದ್ರಿಯ ಮನೆಯಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿದ್ದರು. ಜೂನ್ 15 ರಂದು 2 ಲಕ್ಷ ರೂ. ಕಳ್ಳತನ ಮಾಡಿದ್ದರೆಂದು ಆರೋಪಿಸಿ ಕಳ್ಳತನ ಪ್ರಕರಣದಲ್ಲಿ ವಿಚಾರಣೆಗಾಗಿ ಆಕೆಯ ಮಗ ಉದಯ್ ಕಿರಣ್ ಮತ್ತು ಅವನ ಸ್ನೇಹಿತನೊಂದಿಗೆ ಯಾದಾದ್ರಿ ಭೋಂಗೀರ್ ಜಿಲ್ಲೆಯ ಪೊಲೀಸ್ ಠಾಣೆಗೆ ಕರೆತರಲಾಗಿತ್ತು.

ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು

ಎರಡು ದಿನಗಳ ನಂತರ ಮರಿಯಮ್ಮನನ್ನು ಬಂಧಿಸಲಾಗಿತ್ತು. ತಾಯಿಯೊಂದಿಗೆ ಬಂಧನಕ್ಕೊಳಗಾಗಿದ್ದ ಮಗ, ಇಬ್ಬರಿಗೂ ತೀವ್ರವಾಗಿ ಥಳಿಸಲಾಗಿತ್ತು ಎಂದು ಹೇಳಿದ್ದಾರೆ.

“ಪೊಲೀಸರು ನನ್ನ ತಾಯಿಯ ಹೊಟ್ಟೆಗೆ ಬೂಟು ಕಾಲುಗಳಿಂದ ಒದೆಯುತ್ತಿದ್ದರು. ನೋವನ್ನು ಸಹಿಸಲಾಗದೆ ಆಕೆ ಅಲ್ಲಿಯೇ ಮೂತ್ರ ವಿಸರ್ಜಿಸಿದ್ದರು. ನಂತರ ಆಕೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಳಿಗ್ಗೆ 9.30 ಕ್ಕೆ ಆಕೆಯನ್ನು ಪೊಲೀಸರು ಮತ್ತೆ ಎಬ್ಬಿಸಲು ನೋಡಿದಾಗ, ಆಕೆ ನನ್ನ ಮಡಿಲಲ್ಲಿ ಸಾವನ್ನಪ್ಪಿದರು” ಎಂದು ಮಗ ಆರೋಪಿಸಿದ್ದಾನೆ. ಉದಯ್ ಕಿರಣ್  ಕೂಡ ಗಾಯಗಳಿಮದ ಬಳಲುತ್ತಿದ್ದು, ಖಮ್ಮಂ ಜನರಲ್ ಆಸ್ಪತ್ರೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

ಲಾಕಪ್‌ ಡೆತ್ ಘಟನೆಯ ಬಗ್ಗೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (SHRC) ರಾಚಕೊಂಡ ಪೊಲೀಸ್ ಆಯುಕ್ತರಿಂದ ವಿವರವಾದ ವಿಚಾರಣೆಗೆ ಆದೇಶ ನೀಡಿತ್ತು. ಈ ಘಟನೆಯ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ (NCSC) ತೆಲಂಗಾಣ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

ಜೂನ್ 25 ರಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮರಿಯಮ್ಮ ಅವರ ಸಾವಿನ ಬಗ್ಗೆ ತನಿಖೆ ಆರಂಭಿಸುವಂತೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮಹೇಂದರ್ ರೆಡ್ಡಿ ಅವರಿಗೆ ನಿರ್ದೇಶನ ನೀಡಿದ್ದರು. ತಪ್ಪಿತಸ್ಥರೆಂದು ಕಂಡುಬಂದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಸೇವೆಗಳಿಂದ ತೆಗೆದುಹಾಕುವಂತೆ ಡಿಜಿಪಿಗೆ ಸೂಚಿಸಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಲಾಕಪ್‌ ಡೇತ್‌ಗೆ ಬಲಿಯಾದ ಮೃತ ಅಂಬಾದಿಪುದಿ ಮರಿಯಮ್ಮ ಕುಟುಂಬಕ್ಕೆ 35 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ರಾಚಕೊಂಡ ಪೊಲೀಸ್ ಆಯುಕ್ತ ಮಹೇಶ್ ಭಗವತ್ ಅವರು ಸಂವಿಧಾನದ 311 (2) (ಬಿ) ಮತ್ತು ಸಂವಿಧಾನದ 311 (2) (ಬಿ) ಮತ್ತು 25 (2) ನಡವಳಿಕೆಯ ನಿಯಮಗಳ ಅಡಿಯಲ್ಲಿ ಮಂಗಳವಾರ ಸಬ್ ಇನ್ಸ್‌ಪೆಕ್ಟರ್ ವಿ.ಮಹೇಶ್ವರ ಸೇರಿ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಒಬ್ಬನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....