Homeಮುಖಪುಟತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್...

ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

- Advertisement -
- Advertisement -

ಮಾಜಿ ಸಚಿವ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕ ಕೆ.ಟಿ ರಾಮರಾವ್ (ಕೆಟಿಆರ್) ವಿರುದ್ದ ಕಾಂಗ್ರೆಸ್ ಸರ್ಕಾರದ ಸಚಿವೆ ಕೊಂಡಾ ಸುರೇಖಾ ಅವರು ನೀಡಿರುವ ಹೇಳಿಕೆಯೊಂದು ತೆಲಂಗಾಣದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ನಟರಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ಮದುವೆ ಮುರಿದು ಬೀಳಲು ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಸುರೇಖಾ ಹೇಳಿದ್ದು, ಕೆಟಿಆರ್ ವಿರುದ್ದ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ವರದಿಗಳ ಪ್ರಕಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಸುರೇಖಾ,”ಕೆಟಿಆರ್ ಡ್ರಗ್ ವ್ಯಸನಿ. ಚಿತ್ರರಂಗದ ಪ್ರಮುಖರಿಗೆ ಆತ ರೇವ್ ಪಾರ್ಟಿ ಆಯೋಜಿಸುತ್ತಿದ್ದರು. ಅವರ ದೌರ್ಜನ್ಯ ಸಹಿಸದೇ ಅನೇಕ ನಟಿಯರು ನಟನೆಯನ್ನೇ ಬಿಟ್ಟಿದ್ದಾರೆ. ಕೆಲವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು.. “ನಾಗಾರ್ಜುನ ಒಡೆತನದ ಎನ್‌ ಕನ್ವೆನ್ಷನ್ ಸೆಂಟರ್ ನೆಲಸಮಗೊಳಿಸುವುದು ಬೇಡ ಎಂದಾದಲ್ಲಿ, ತನ್ನ ಬಳಿ ಸಮಂತಾ ಅವರನ್ನು ಕಳುಹಿಸುವಂತೆ ರಾಮರಾವ್ ಬೇಡಿಕೆ ಇಟ್ಟಿದ್ದರು. ರಾಮರಾವ್ ಬಳಿ ಹೋಗುವಂತೆ ಸಮಂತಾ ಅವರಿಗೆ ನಾಗಾರ್ಜುನ ಬಲವಂತ ಮಾಡಿದಾಗ, ಅದನ್ನು ಒಪ್ಪಿಕೊಂಡಿರಲಿಲ್ಲ. ಈ ವಿಚಾರ ವಿಚ್ಛೇದನಕ್ಕೆ ಕಾರಣವಾಯಿತು” ಎಂದಿದ್ದಾರೆ.

ಸಚಿವೆಯ ಈ ಹೇಳಿಕೆ ತೆಲಂಗಾಣದ ರಾಜಕೀಯ ಮತ್ತು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಟ ನಾಗಾರ್ಜುನ “ಸಚಿವೆ ಕೊಂಡಾ ಸುರೇಖಾ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರು ಇರುವ ಚಿತ್ರ ತಾರೆಯರನ್ನು ನಿಮ್ಮ ವಿರೋಧಿಗಳನ್ನು ಟೀಕಿಸುವುದಕ್ಕಾಗಿ ಬಳಸಿಕೊಳ್ಳಬೇಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೇರೆಯವರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಮಹಿಳೆಯಾಗಿ ನಮ್ಮ ಕುಟುಂಬದ ವಿರುದ್ದದ ನಿಮ್ಮ ಹೇಳಿಕೆಗಳು ಹಾಗೂ ಆರೋಪಗಳು ಅಸಂಬದ್ಧ ಹಾಗೂ ಸುಳ್ಳು, ಕೂಡಲೇ ಈ ಹೇಳಿಕೆಗಳನ್ನು ಹಿಂಪಡೆಯುವಂತೆ ನಿಮ್ಮಲ್ಲಿ ಮನವಿ ಮಾಡುವೆ” ಎಂದೂ ಹೇಳಿದ್ದಾರೆ.

ನಟಿ ಸಮಂತಾ ಕೂಡ ಸಚಿವೆಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತನ್ನ ಹೆಸರನ್ನು ರಾಜಕೀಯದಿಂದ ದೂರ ಇಡುವಂತೆ ಕೋರಿದ್ದಾರೆ. ಅಲ್ಲದೆ, ಮಹಿಳೆ ಹೊರಗೆ ಬಂದು ಕೆಲಸ ಮಾಡಲು ಸಾಕಷ್ಟಯ ಧೈರ್ಯ ಮತ್ತು ಶಕ್ತಿ ಬೇಕಾಗುತ್ತದೆ ಎಂದು ವಿವರಿಸಿದ್ದಾರೆ.

ಲೀಗಲ್ ನೋಟಿಸ್ ಕಳುಹಿಸಿದ ಕೆಟಿಆರ್

ಸಚಿವೆಯ ಹೇಳಿಕೆ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದಿರುವ ಕೆಟಿಆರ್, “ಇಂತಹ ಹೇಳಿಕೆ ನೀಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಿದ್ದಾರೆ” ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಸಚಿವೆ ಸುರೇಖಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. 24 ಗಂಟೆಯೊಳಗೆ ಹೇಳಿಕೆ ಹಿಂಪಡೆಯದೆ ಇದ್ದರೆ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...