Homeಮುಖಪುಟತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್...

ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

- Advertisement -
- Advertisement -

ಮಾಜಿ ಸಚಿವ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕ ಕೆ.ಟಿ ರಾಮರಾವ್ (ಕೆಟಿಆರ್) ವಿರುದ್ದ ಕಾಂಗ್ರೆಸ್ ಸರ್ಕಾರದ ಸಚಿವೆ ಕೊಂಡಾ ಸುರೇಖಾ ಅವರು ನೀಡಿರುವ ಹೇಳಿಕೆಯೊಂದು ತೆಲಂಗಾಣದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ನಟರಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ಮದುವೆ ಮುರಿದು ಬೀಳಲು ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಸುರೇಖಾ ಹೇಳಿದ್ದು, ಕೆಟಿಆರ್ ವಿರುದ್ದ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ವರದಿಗಳ ಪ್ರಕಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಸುರೇಖಾ,”ಕೆಟಿಆರ್ ಡ್ರಗ್ ವ್ಯಸನಿ. ಚಿತ್ರರಂಗದ ಪ್ರಮುಖರಿಗೆ ಆತ ರೇವ್ ಪಾರ್ಟಿ ಆಯೋಜಿಸುತ್ತಿದ್ದರು. ಅವರ ದೌರ್ಜನ್ಯ ಸಹಿಸದೇ ಅನೇಕ ನಟಿಯರು ನಟನೆಯನ್ನೇ ಬಿಟ್ಟಿದ್ದಾರೆ. ಕೆಲವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು.. “ನಾಗಾರ್ಜುನ ಒಡೆತನದ ಎನ್‌ ಕನ್ವೆನ್ಷನ್ ಸೆಂಟರ್ ನೆಲಸಮಗೊಳಿಸುವುದು ಬೇಡ ಎಂದಾದಲ್ಲಿ, ತನ್ನ ಬಳಿ ಸಮಂತಾ ಅವರನ್ನು ಕಳುಹಿಸುವಂತೆ ರಾಮರಾವ್ ಬೇಡಿಕೆ ಇಟ್ಟಿದ್ದರು. ರಾಮರಾವ್ ಬಳಿ ಹೋಗುವಂತೆ ಸಮಂತಾ ಅವರಿಗೆ ನಾಗಾರ್ಜುನ ಬಲವಂತ ಮಾಡಿದಾಗ, ಅದನ್ನು ಒಪ್ಪಿಕೊಂಡಿರಲಿಲ್ಲ. ಈ ವಿಚಾರ ವಿಚ್ಛೇದನಕ್ಕೆ ಕಾರಣವಾಯಿತು” ಎಂದಿದ್ದಾರೆ.

ಸಚಿವೆಯ ಈ ಹೇಳಿಕೆ ತೆಲಂಗಾಣದ ರಾಜಕೀಯ ಮತ್ತು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಟ ನಾಗಾರ್ಜುನ “ಸಚಿವೆ ಕೊಂಡಾ ಸುರೇಖಾ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರು ಇರುವ ಚಿತ್ರ ತಾರೆಯರನ್ನು ನಿಮ್ಮ ವಿರೋಧಿಗಳನ್ನು ಟೀಕಿಸುವುದಕ್ಕಾಗಿ ಬಳಸಿಕೊಳ್ಳಬೇಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೇರೆಯವರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಮಹಿಳೆಯಾಗಿ ನಮ್ಮ ಕುಟುಂಬದ ವಿರುದ್ದದ ನಿಮ್ಮ ಹೇಳಿಕೆಗಳು ಹಾಗೂ ಆರೋಪಗಳು ಅಸಂಬದ್ಧ ಹಾಗೂ ಸುಳ್ಳು, ಕೂಡಲೇ ಈ ಹೇಳಿಕೆಗಳನ್ನು ಹಿಂಪಡೆಯುವಂತೆ ನಿಮ್ಮಲ್ಲಿ ಮನವಿ ಮಾಡುವೆ” ಎಂದೂ ಹೇಳಿದ್ದಾರೆ.

ನಟಿ ಸಮಂತಾ ಕೂಡ ಸಚಿವೆಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತನ್ನ ಹೆಸರನ್ನು ರಾಜಕೀಯದಿಂದ ದೂರ ಇಡುವಂತೆ ಕೋರಿದ್ದಾರೆ. ಅಲ್ಲದೆ, ಮಹಿಳೆ ಹೊರಗೆ ಬಂದು ಕೆಲಸ ಮಾಡಲು ಸಾಕಷ್ಟಯ ಧೈರ್ಯ ಮತ್ತು ಶಕ್ತಿ ಬೇಕಾಗುತ್ತದೆ ಎಂದು ವಿವರಿಸಿದ್ದಾರೆ.

ಲೀಗಲ್ ನೋಟಿಸ್ ಕಳುಹಿಸಿದ ಕೆಟಿಆರ್

ಸಚಿವೆಯ ಹೇಳಿಕೆ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದಿರುವ ಕೆಟಿಆರ್, “ಇಂತಹ ಹೇಳಿಕೆ ನೀಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಿದ್ದಾರೆ” ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಸಚಿವೆ ಸುರೇಖಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. 24 ಗಂಟೆಯೊಳಗೆ ಹೇಳಿಕೆ ಹಿಂಪಡೆಯದೆ ಇದ್ದರೆ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...