Homeದಲಿತ್ ಫೈಲ್ಸ್ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

ತೆಲಂಗಾಣ: ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮ*ತ್ಯೆಗೆ ಯತ್ನಿಸಿದ್ದ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಸಾವು

- Advertisement -
- Advertisement -

ತೆಲಂಗಾಣದ ವಾರಂಗಲ್‌ನಲ್ಲಿ ರ್‍ಯಾಗಿಂಗ್‌ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸ್ನಾತಕೋತ್ತರ ವೈದ್ಯಕೀಯ ದಲಿತ ವಿದ್ಯಾರ್ಥಿನಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಧಾರಾವತ್ ಪ್ರೀತಿ ಅವರು ಫೆಬ್ರವರಿ 22 ರಂದು ಕರ್ತವ್ಯದಲ್ಲಿದ್ದಾಗ ವಾರಂಗಲ್‌ನ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯ ಸಿಬ್ಬಂದಿ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಪ್ರೀತಿಯವರು ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಡಿ ಅರಿವಳಿಕೆ ವಿದ್ಯಾರ್ಥಿಯಾಗಿದ್ದು, ಆಕೆಯ ಸೀನಿಯರ್‌‌ ಮೊಹಮ್ಮದ್ ಸೈಫ್ ಕಿರುಕುಳ ನೀಡುತ್ತಿದ್ದರು ಎಂದು ವರದಿಯಾಗಿದೆ. ಫೆಬ್ರವರಿ 24ರಂದು ಸೈಫ್‌ನನ್ನು ಬಂಧಿಸಲಾಗಿದೆ.

ಬಂಧನದ ನಂತರ ವಾರಂಗಲ್ ಪೊಲೀಸ್ ಕಮಿಷನರ್ ಎ.ವಿ.ರಂಗನಾಥ್ ಪ್ರತಿಕ್ರಿಯಿಸಿ, “ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್‌ಗಳು, ಪ್ರೀತಿ ಮತ್ತು ಸೈಫ್ ನಡುವಿನ ವೈಯಕ್ತಿಕ ಚಾಟ್‌ಗಳು ರ್‍ಯಾಗಿಂಗ್‌ ಪ್ರಕರಣವನ್ನು ಸೂಚಿಸುತ್ತವೆ” ಎಂದಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ, ರ್‍ಯಾಗಿಂಗ್‌ಗೆ ಸಂಬಂಧಿಸಿದ ಸೆಕ್ಷನ್‌ಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೈದ್ರಾಬಾದ್‌ನಲ್ಲಿನ ನಿಜಾಮ್‌ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರೀತಿಯವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸಾವಿನ ವಿಷಯ ಹೊರಬಿದ್ದ ಬಳಿಕ ಇಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ಭಾನುವಾರ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಗಾಗಿ ಪ್ರೀತಿಯವರ ಮೃತದೇಹವನ್ನು ಅಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದಾಗ ವಿದ್ಯಾರ್ಥಿಗಳು ಮತ್ತು ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚಿನ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

“ಕಳೆದ ನಾಲ್ಕು ದಿನಗಳಲ್ಲಿ ನನ್ನ ಮಗಳಿಗೆ ಯಾವ ಚಿಕಿತ್ಸೆ ನೀಡಲಾಗಿದೆ ಎಂಬುದರ ಕುರಿತು ವಿವರವಾದ ವರದಿಯನ್ನು ನೀಡಬೇಕು” ಎಂದು ಪ್ರೀತಿಯವರ ಹೇಳಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿರಿ: ದಲಿತ ಕುಟುಂಬಕ್ಕೆ ಬೆದರಿಕೆ; ಸ್ವಘೋಷಿತ ದೇವಮಾನವನ ಸಹೋದರನ ವಿರುದ್ಧ ಎಫ್‌ಐಆರ್‌

5 ಕೋಟಿ ರೂ. ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತೆಲಂಗಾಣ ಆರೋಗ್ಯ ಸಚಿವ ಟಿ ಹರೀಶ್ ರಾವ್ ಅವರು ಪ್ರೀತಿಯವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಿಮ್ಸ್‌ನ ವೈದ್ಯಕೀಯ ತಂಡವು ಪ್ರೀತಿಯವರನ್ನು ಉಳಿಸಲು ದಣಿವರಿಯದೆ ಕೆಲಸ ಮಾಡಿದೆ. ಡಾ.ಪ್ರೀತಿ ಸಂಪೂರ್ಣವಾಗಿ ಗುಣಮುಖರಾಗಿ ಹಿಂತಿರುಗುತ್ತಾರೆಂದು ನಾವು ಭಾವಿಸಿದ್ದೆವು. ಆದರೆ ಅವರು ಹಿಂತಿರುಗದ ಲೋಕಕ್ಕೆ ಹೋದರು” ಎಂದು ಹರೀಶ್ ರಾವ್ ಪ್ರತಿಕ್ರಿಯಿಸಿದ್ದಾರೆ.

10 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಪಂಚಾಯತ್ ರಾಜ್ ಸಚಿವ ಎರ್ರಬೆಳ್ಳಿ ದಯಾಕರ್ ರಾವ್ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...