Homeಮುಖಪುಟತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

- Advertisement -
- Advertisement -

ಜಮೀನು ವಿವಾದದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್‌ ಏಜೆಂಟ್‌ಗಳ ಗುಂಪೊಂದು ದಲಿತ ಕುಟುಂಬವನ್ನು ಶವಸಂಸ್ಕಾರ ಮಾಡದಂತೆ ತಡೆದಿರುವ ಘಟನೆ ಮಂಗಳವಾರ ನಡೆದಿದ್ದು, ತಡವಾಗಿ ಗುರುವಾರ ಬೆಳಕಿಗೆ ಬಂದಿದೆ.

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಮಂದಮರ್ರಿ ಮಂಡಲದಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿದು ಮಂದಮರ್ರಿ ತಹಶೀಲ್ದಾರ್ ಹಾಗೂ ವೃತ್ತ ನಿರೀಕ್ಷಕರು ಸ್ಥಳಕ್ಕೆ ತೆರಳಿ ಅಂತಿಮ ಸಂಸ್ಕಾರಕ್ಕೆ ನೆರವಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯರ ಪ್ರಕಾರ, ಬುರ್ದಗುಡೆಂ ಗ್ರಾಮದ ನಿವಾಸಿಗಳಾದ ನೇತಕಣಿ ಕುಟುಂಬದ ಸದಸ್ಯರು ಅಂತ್ಯಕ್ರಿಯೆಗಾಗಿ ಸಂಬಂಧಿಕರ ಶವವನ್ನು ತಂದರು. ಸುಮಾರು 80 ವರ್ಷಗಳ ಹಿಂದೆ ಕಲ್ವಕುಂತಲ ಮಾಧವ್ ರಾವ್ ಎಂಬುವವರು ದಲಿತ ಸಮುದಾಯಕ್ಕೆ ಸ್ಮಶಾನ ಸ್ಥಾಪಿಸಲು ಭೂಮಿಯನ್ನು ದಾನ ಮಾಡಿದ್ದರು. ಆದರೆ, ಎನ್ ಉಪೇಂದರ್ ಗೌಡ್ ಮತ್ತು ವೆಂಕಟೇಶ್ ಗೌಡ್ ಅವರು ತಮ್ಮ ಸಹಚರರೊಂದಿಗೆ ಸೇರಿ ಜಮೀನು ಖರೀದಿಸಿರುವುದಾಗಿ ಆರೋಪಿಸಿ ದುರ್ಗಂ ಶಂಕರ್ ಮತ್ತು ಅವರ ಪುತ್ರ ಶ್ರೀನಿವಾಸ್ ಅಂತ್ಯಸಂಸ್ಕಾರ ನೆರವೇರಿಸಲು ಅಡ್ಡಿಪಡಿಸಿದ್ದಾರೆ. ನಂತರ ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಶವ ಸಂಸ್ಕಾರದ ಮೇಲ್ವಿಚಾರಣೆ ನಡೆಸಿದರು ಎಂದು ವಿವರಿಸಿದ್ದಾರೆ.

ನಮ್ಮ ಪೂರ್ವಜರ ಅಂತ್ಯಸಂಸ್ಕಾರ ಮಾಡಿದ ಭೂಮಿಯನ್ನು ಏಜೆಂಟರು ಅಗೆದಿದ್ದಾರೆ ಎಂದು ದಲಿತ ಕುಟುಂಬ
ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದವರು, ಹಿಂದುಳಿದ ವರ್ಗಗಳ (ಬಿಸಿ) ಸದಸ್ಯರು ತಮ್ಮ ಪೂರ್ವಜರನ್ನು ಸಂಸ್ಕಾರ ಮಾಡಿದ ಭೂಮಿಯನ್ನು ರಿಯಲ್‌ ಎಸ್ಟೇಟ್ ಮಾಫಿಯಾ ನಾಶಪಡಿಸಿ ನಿವೇಶನಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಈ ಪ್ರದೇಶವು ಮಂದಮರ್ರಿಯು ಪ್ರದೇಶದ ಅಧಿಕಾರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಹೇಳಿದ ಅವರು, ಎಲ್‌ಟಿಆರ್‌ 1/70 ಎಂದೂ ಕರೆಯಲ್ಪಡುವ 1970 ರ ಭೂ ವರ್ಗಾವಣೆ ನಿಯಂತ್ರಣ ಕಾಯಿದೆ 1, ಯಾವುದೇ ಬುಡಕಟ್ಟು ಜನಾಂಗದವರಲ್ಲದವರು ಈ ಪ್ರದೇಶದಲ್ಲಿ ಭೂಮಿಯನ್ನು ಹೊಂದುವುದನ್ನು ತಡೆಯುತ್ತದೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಬುಡಕಟ್ಟು ಜನಾಂಗದವರಲ್ಲದವರಿಗೆ ನೀಡಲಾದ ಯಾವುದೇ ಭೂಮಿ ಶೂನ್ಯ ಮತ್ತು ಅನೂರ್ಜಿತವಾಗಿದೆ ಎಂದು ಅವರು ಹೇಳಿದರು. ಸ್ಮಶಾನ ಭೂಮಿಯನ್ನು ಮರಳಿ ಪಡೆಯುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದರು.

ಇದನ್ನೂ ಓದಿ; ಅತ್ಯಾಚಾರ ಪ್ರಕರಣ: ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ ನಟ ಸಿದ್ದಿಕ್ ವಿರುದ್ಧ ಲುಕ್ ಔಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...