Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...