Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...