Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...