Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...