Homeಮುಖಪುಟತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರ ಅನರ್ಹತೆ ಕೋರಿದ ಬಿಆರ್‌ಎಸ್‌. 5 ಅರ್ಜಿಗಳ ನಿರ್ಧಾರ ಪ್ರಕಟ

- Advertisement -
- Advertisement -

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ.

ಶಾಸಕರ ಅನರ್ಹತೆ ಅರ್ಜಿಗಳ ಮೇಲಿನ ಆದೇಶಗಳನ್ನು ಪ್ರಕಟಿಸಿದ ಸ್ಪೀಕರ್, ಐವರು ಶಾಸಕರು ಬಿಆರ್‌ಎಸ್‌ನಿಂದ ಕಾಂಗ್ರೆಸ್‌ಗೆ ಔಪಚಾರಿಕವಾಗಿ ಪಕ್ಷಾಂತರಗೊಂಡಿದ್ದಾರೆ ಎಂಬುದಕ್ಕೆ ಅರ್ಜಿದಾರರು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗಾಗಿ, ಪಕ್ಷಾಂತರ ನಿಷೇಧ ಕಾನೂನು ಶಾಸಕರಾದ ತೆಲ್ಲಂ ವೆಂಕಟ್ ರಾವ್, ಬಂಡ್ಲಾ ಕೃಷ್ಣ ಮೋಹನ್ ರೆಡ್ಡಿ, ಟಿ ಪ್ರಕಾಶ್ ಗೌಡ್, ಗುಡೆಮ್ ಮಹಿಪಾಲ್ ರೆಡ್ಡಿ ಮತ್ತು ಅರೆಕಪುಡಿ ಗಾಂಧಿ ಅವರಿಗೆ ಅನ್ವಯಿಸುವುದಿಲ್ಲ ಎಂದು ಸ್ಪೀಕರ್ ತೀರ್ಪು ನೀಡಿದ್ದಾರೆ.

ಶಾಸಕರು ತಾಂತ್ರಿಕವಾಗಿ ಇನ್ನೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ಬದಲಾಯಿಸಿದ ಆರೋಪದ ಮೇಲೆ 10 ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿತ್ತು. ಈ ಪೈಕಿ ಐವರ ಕುರಿತು ಸ್ಪೀಕರ್ ಆದೇಶ ಪ್ರಕಟಿಸಿದ್ದಾರೆ. ಒಟ್ಟು ಎಂಟು ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸ್ಪೀಕರ್ ಆದೇಶಗಳನ್ನು ಕಾಯ್ದಿರಿಸಿದ್ದರು.

ಇತರ ಇಬ್ಬರು ಶಾಸಕರಾದ ದಾನಂ ನಾಗೇಂದರ್ ಮತ್ತು ಕಡಿಯಂ ಶ್ರೀಹರಿ ಅವರಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸಲ್ಲಿಸಿದ ನಂತರ, ಅವರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಳೆದ ತಿಂಗಳು ಸ್ಪೀಕರ್ ಕಳುಹಿಸಿದ್ದ ನೋಟಿಸ್‌ಗೆ ಉತ್ತರಿಸಲು ಅವರು ಹೆಚ್ಚಿನ ಸಮಯ ಕೋರಿದ್ದರು.

2023ರ ಚುನಾವಣೆಯಲ್ಲಿ ತನ್ನ ಟಿಕೆಟ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿ 2024ರಲ್ಲಿ ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರನ್ನು ಅನರ್ಹಗೊಳಿಸುವಂತೆ ಬಿಆರ್‌ಎಸ್ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ಸೇರಿದ್ದಾರೆ ಮತ್ತು ವಿಧಾನಸಭೆಯಲ್ಲೂ ಅವರ ಜೊತೆ ಕುಳಿತಿದ್ದಾರೆ ಎಂದು ಬಿಆರ್‌ಎಸ್ ದೂರಿದೆ. ಆದರೆ, ಶಾಸಕರು ಆಡಳಿತ ಪಕ್ಷ ಸೇರಿರುವುದನ್ನು ನಿರಾಕರಿಸಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ನಿಧಿ ಕೇಳಲು ಮಾತ್ರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾಗಿ ವಾದಿಸಿದ್ದಾರೆ.

ಶಾಸಕ ನಾಗೇಂದರ್ ಕಾಂಗ್ರೆಸ್ ಸೇರಿದ್ದಲ್ಲದೆ, 2024ರ ಲೋಕಸಭಾ ಚುನಾವಣೆಯಲ್ಲಿ ಸಿಕಂದರಾಬಾದ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಎಂದು ಬಿಆರ್‌ಎಸ್ ಸ್ಪೀಕರ್ ಗಮನಕ್ಕೆ ತಂದಿತ್ತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಂಗಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತಮ್ಮ ಪುತ್ರಿ ಕಡಿಯಂ ಕವಿಯಾ ಪರ ಕಡಿಯಂ ಶ್ರೀಹರಿ ಬಹಿರಂಗ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿತ್ತು.

10 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ನಿರ್ಧರಿಸಲು ತಾನು ನೀಡಿದ್ದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ತೆಲಂಗಾಣ ಸ್ಪೀಕರ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.

ಜುಲೈ 31ರಂದು, ಆಗಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ಸ್ಪೀಕರ್‌ಗೆ ಸೂಚಿಸಿತ್ತು.

ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡುವಾಗ, ಪೀಠವು ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದಿರುವುದನ್ನು ಅತ್ಯಂತ ಗಂಭೀರವಾದ ನ್ಯಾಯಾಂಗ ನಿಂದನೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...