Homeಮುಖಪುಟತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರ ಅನರ್ಹತೆ ಕೋರಿದ ಬಿಆರ್‌ಎಸ್‌. 5 ಅರ್ಜಿಗಳ ನಿರ್ಧಾರ ಪ್ರಕಟ

- Advertisement -
- Advertisement -

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ.

ಶಾಸಕರ ಅನರ್ಹತೆ ಅರ್ಜಿಗಳ ಮೇಲಿನ ಆದೇಶಗಳನ್ನು ಪ್ರಕಟಿಸಿದ ಸ್ಪೀಕರ್, ಐವರು ಶಾಸಕರು ಬಿಆರ್‌ಎಸ್‌ನಿಂದ ಕಾಂಗ್ರೆಸ್‌ಗೆ ಔಪಚಾರಿಕವಾಗಿ ಪಕ್ಷಾಂತರಗೊಂಡಿದ್ದಾರೆ ಎಂಬುದಕ್ಕೆ ಅರ್ಜಿದಾರರು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗಾಗಿ, ಪಕ್ಷಾಂತರ ನಿಷೇಧ ಕಾನೂನು ಶಾಸಕರಾದ ತೆಲ್ಲಂ ವೆಂಕಟ್ ರಾವ್, ಬಂಡ್ಲಾ ಕೃಷ್ಣ ಮೋಹನ್ ರೆಡ್ಡಿ, ಟಿ ಪ್ರಕಾಶ್ ಗೌಡ್, ಗುಡೆಮ್ ಮಹಿಪಾಲ್ ರೆಡ್ಡಿ ಮತ್ತು ಅರೆಕಪುಡಿ ಗಾಂಧಿ ಅವರಿಗೆ ಅನ್ವಯಿಸುವುದಿಲ್ಲ ಎಂದು ಸ್ಪೀಕರ್ ತೀರ್ಪು ನೀಡಿದ್ದಾರೆ.

ಶಾಸಕರು ತಾಂತ್ರಿಕವಾಗಿ ಇನ್ನೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ಬದಲಾಯಿಸಿದ ಆರೋಪದ ಮೇಲೆ 10 ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿತ್ತು. ಈ ಪೈಕಿ ಐವರ ಕುರಿತು ಸ್ಪೀಕರ್ ಆದೇಶ ಪ್ರಕಟಿಸಿದ್ದಾರೆ. ಒಟ್ಟು ಎಂಟು ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸ್ಪೀಕರ್ ಆದೇಶಗಳನ್ನು ಕಾಯ್ದಿರಿಸಿದ್ದರು.

ಇತರ ಇಬ್ಬರು ಶಾಸಕರಾದ ದಾನಂ ನಾಗೇಂದರ್ ಮತ್ತು ಕಡಿಯಂ ಶ್ರೀಹರಿ ಅವರಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸಲ್ಲಿಸಿದ ನಂತರ, ಅವರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಳೆದ ತಿಂಗಳು ಸ್ಪೀಕರ್ ಕಳುಹಿಸಿದ್ದ ನೋಟಿಸ್‌ಗೆ ಉತ್ತರಿಸಲು ಅವರು ಹೆಚ್ಚಿನ ಸಮಯ ಕೋರಿದ್ದರು.

2023ರ ಚುನಾವಣೆಯಲ್ಲಿ ತನ್ನ ಟಿಕೆಟ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿ 2024ರಲ್ಲಿ ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರನ್ನು ಅನರ್ಹಗೊಳಿಸುವಂತೆ ಬಿಆರ್‌ಎಸ್ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ಸೇರಿದ್ದಾರೆ ಮತ್ತು ವಿಧಾನಸಭೆಯಲ್ಲೂ ಅವರ ಜೊತೆ ಕುಳಿತಿದ್ದಾರೆ ಎಂದು ಬಿಆರ್‌ಎಸ್ ದೂರಿದೆ. ಆದರೆ, ಶಾಸಕರು ಆಡಳಿತ ಪಕ್ಷ ಸೇರಿರುವುದನ್ನು ನಿರಾಕರಿಸಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ನಿಧಿ ಕೇಳಲು ಮಾತ್ರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾಗಿ ವಾದಿಸಿದ್ದಾರೆ.

ಶಾಸಕ ನಾಗೇಂದರ್ ಕಾಂಗ್ರೆಸ್ ಸೇರಿದ್ದಲ್ಲದೆ, 2024ರ ಲೋಕಸಭಾ ಚುನಾವಣೆಯಲ್ಲಿ ಸಿಕಂದರಾಬಾದ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಎಂದು ಬಿಆರ್‌ಎಸ್ ಸ್ಪೀಕರ್ ಗಮನಕ್ಕೆ ತಂದಿತ್ತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಂಗಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತಮ್ಮ ಪುತ್ರಿ ಕಡಿಯಂ ಕವಿಯಾ ಪರ ಕಡಿಯಂ ಶ್ರೀಹರಿ ಬಹಿರಂಗ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿತ್ತು.

10 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ನಿರ್ಧರಿಸಲು ತಾನು ನೀಡಿದ್ದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ತೆಲಂಗಾಣ ಸ್ಪೀಕರ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.

ಜುಲೈ 31ರಂದು, ಆಗಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ಸ್ಪೀಕರ್‌ಗೆ ಸೂಚಿಸಿತ್ತು.

ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡುವಾಗ, ಪೀಠವು ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದಿರುವುದನ್ನು ಅತ್ಯಂತ ಗಂಭೀರವಾದ ನ್ಯಾಯಾಂಗ ನಿಂದನೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...