Homeಮುಖಪುಟತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರ ಅನರ್ಹತೆ ಕೋರಿದ ಬಿಆರ್‌ಎಸ್‌. 5 ಅರ್ಜಿಗಳ ನಿರ್ಧಾರ ಪ್ರಕಟ

- Advertisement -
- Advertisement -

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ.

ಶಾಸಕರ ಅನರ್ಹತೆ ಅರ್ಜಿಗಳ ಮೇಲಿನ ಆದೇಶಗಳನ್ನು ಪ್ರಕಟಿಸಿದ ಸ್ಪೀಕರ್, ಐವರು ಶಾಸಕರು ಬಿಆರ್‌ಎಸ್‌ನಿಂದ ಕಾಂಗ್ರೆಸ್‌ಗೆ ಔಪಚಾರಿಕವಾಗಿ ಪಕ್ಷಾಂತರಗೊಂಡಿದ್ದಾರೆ ಎಂಬುದಕ್ಕೆ ಅರ್ಜಿದಾರರು ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗಾಗಿ, ಪಕ್ಷಾಂತರ ನಿಷೇಧ ಕಾನೂನು ಶಾಸಕರಾದ ತೆಲ್ಲಂ ವೆಂಕಟ್ ರಾವ್, ಬಂಡ್ಲಾ ಕೃಷ್ಣ ಮೋಹನ್ ರೆಡ್ಡಿ, ಟಿ ಪ್ರಕಾಶ್ ಗೌಡ್, ಗುಡೆಮ್ ಮಹಿಪಾಲ್ ರೆಡ್ಡಿ ಮತ್ತು ಅರೆಕಪುಡಿ ಗಾಂಧಿ ಅವರಿಗೆ ಅನ್ವಯಿಸುವುದಿಲ್ಲ ಎಂದು ಸ್ಪೀಕರ್ ತೀರ್ಪು ನೀಡಿದ್ದಾರೆ.

ಶಾಸಕರು ತಾಂತ್ರಿಕವಾಗಿ ಇನ್ನೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಆಡಳಿತ ಪಕ್ಷಕ್ಕೆ ನಿಷ್ಠೆಯನ್ನು ಬದಲಾಯಿಸಿದ ಆರೋಪದ ಮೇಲೆ 10 ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿತ್ತು. ಈ ಪೈಕಿ ಐವರ ಕುರಿತು ಸ್ಪೀಕರ್ ಆದೇಶ ಪ್ರಕಟಿಸಿದ್ದಾರೆ. ಒಟ್ಟು ಎಂಟು ಶಾಸಕರ ಅನರ್ಹತೆ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಸ್ಪೀಕರ್ ಆದೇಶಗಳನ್ನು ಕಾಯ್ದಿರಿಸಿದ್ದರು.

ಇತರ ಇಬ್ಬರು ಶಾಸಕರಾದ ದಾನಂ ನಾಗೇಂದರ್ ಮತ್ತು ಕಡಿಯಂ ಶ್ರೀಹರಿ ಅವರಿಗೆ ನೀಡಲಾದ ನೋಟಿಸ್‌ಗಳಿಗೆ ಉತ್ತರಗಳನ್ನು ಸಲ್ಲಿಸಿದ ನಂತರ, ಅವರ ಅನರ್ಹತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕಳೆದ ತಿಂಗಳು ಸ್ಪೀಕರ್ ಕಳುಹಿಸಿದ್ದ ನೋಟಿಸ್‌ಗೆ ಉತ್ತರಿಸಲು ಅವರು ಹೆಚ್ಚಿನ ಸಮಯ ಕೋರಿದ್ದರು.

2023ರ ಚುನಾವಣೆಯಲ್ಲಿ ತನ್ನ ಟಿಕೆಟ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿ 2024ರಲ್ಲಿ ಕಾಂಗ್ರೆಸ್‌ಗೆ ನಿಷ್ಠೆ ಬದಲಿಸಿದ 10 ಶಾಸಕರನ್ನು ಅನರ್ಹಗೊಳಿಸುವಂತೆ ಬಿಆರ್‌ಎಸ್ ಅರ್ಜಿಗಳನ್ನು ಸಲ್ಲಿಸಿತ್ತು.

ಈ ಶಾಸಕರು ಬಹಿರಂಗವಾಗಿ ಕಾಂಗ್ರೆಸ್ ಸೇರಿದ್ದಾರೆ ಮತ್ತು ವಿಧಾನಸಭೆಯಲ್ಲೂ ಅವರ ಜೊತೆ ಕುಳಿತಿದ್ದಾರೆ ಎಂದು ಬಿಆರ್‌ಎಸ್ ದೂರಿದೆ. ಆದರೆ, ಶಾಸಕರು ಆಡಳಿತ ಪಕ್ಷ ಸೇರಿರುವುದನ್ನು ನಿರಾಕರಿಸಿದ್ದಾರೆ. ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ನಿಧಿ ಕೇಳಲು ಮಾತ್ರ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿದ್ದಾಗಿ ವಾದಿಸಿದ್ದಾರೆ.

ಶಾಸಕ ನಾಗೇಂದರ್ ಕಾಂಗ್ರೆಸ್ ಸೇರಿದ್ದಲ್ಲದೆ, 2024ರ ಲೋಕಸಭಾ ಚುನಾವಣೆಯಲ್ಲಿ ಸಿಕಂದರಾಬಾದ್‌ನಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು ಎಂದು ಬಿಆರ್‌ಎಸ್ ಸ್ಪೀಕರ್ ಗಮನಕ್ಕೆ ತಂದಿತ್ತು.

ಕಾಂಗ್ರೆಸ್ ಅಭ್ಯರ್ಥಿಯಾಗಿ ವಾರಂಗಲ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದ ತಮ್ಮ ಪುತ್ರಿ ಕಡಿಯಂ ಕವಿಯಾ ಪರ ಕಡಿಯಂ ಶ್ರೀಹರಿ ಬಹಿರಂಗ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿತ್ತು.

10 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ನಿರ್ಧರಿಸಲು ತಾನು ನೀಡಿದ್ದ ನಿರ್ದೇಶನವನ್ನು ಪಾಲಿಸದಿದ್ದಕ್ಕಾಗಿ ನವೆಂಬರ್ 17 ರಂದು ಸುಪ್ರೀಂ ಕೋರ್ಟ್ ತೆಲಂಗಾಣ ಸ್ಪೀಕರ್‌ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿತ್ತು.

ಜುಲೈ 31ರಂದು, ಆಗಿನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು 10 ಶಾಸಕರ ಅನರ್ಹತೆಯ ವಿಷಯವನ್ನು ಮೂರು ತಿಂಗಳಲ್ಲಿ ನಿರ್ಧರಿಸುವಂತೆ ಸ್ಪೀಕರ್‌ಗೆ ಸೂಚಿಸಿತ್ತು.

ಬಿಆರ್‌ಎಸ್ ನಾಯಕರು ಸಲ್ಲಿಸಿದ ಅರ್ಜಿಗಳ ಕುರಿತು ಸ್ಪೀಕರ್ ಮತ್ತು ಇತರರಿಗೆ ನೋಟಿಸ್ ನೀಡುವಾಗ, ಪೀಠವು ತನ್ನ ಹಿಂದಿನ ನಿರ್ದೇಶನಗಳನ್ನು ಪಾಲಿಸದಿರುವುದನ್ನು ಅತ್ಯಂತ ಗಂಭೀರವಾದ ನ್ಯಾಯಾಂಗ ನಿಂದನೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...