Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...