Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...