Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...