Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...