Homeಮುಖಪುಟತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

ತೆಲಂಗಾಣ: ಕೃಷಿ ಕೆಲಸಕ್ಕೆ ಬಾರದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಥಳಿತ; ಕಾರದ ಪುಡಿ ಹಚ್ಚಿ ಚಿತ್ರಹಿಂಸೆ

- Advertisement -
- Advertisement -

ಹಣಕಾಸು ವಿಚಾರಕ್ಕೆ ಸಬಂಧಿಸಿದಂತೆ ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ 26 ವರ್ಷದ ಬುಡಕಟ್ಟು ಮಹಿಳೆಗೆ ಸಾರ್ವಜನಿಕವಾಗಿ ಅಮಾನವೀಯವಾಗಿ ಥಳಿಸಿದ್ದು, ಆಕೆಯ ಕಣ್ಣುಗಳು ಮತ್ತು ಜನನಾಂಗಗಳಿಗೆ ಕಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿರುವ ಪ್ರಕರಣ ಒಂದು ವಾರದ ನಂತರ ತಡವಾಗಿ ಬೆಳಕಿಗೆ ಬಂದಿದೆ.

ಸಂತ್ರಸ್ತ ಮಹಿಳೆಯು ಮೂರು ಮಕ್ಕಳ ತಾಯಿ ಎಂದು ಗೊತ್ತಾಗಿದ್ದು, ಹಲ್ಲೆಯ ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವೀಡಿಯೊದಲ್ಲಿ ಗುಲಾಬಿ ಬಣ್ಣದ ಸೀರೆ ಧರಿಸಿರುವ ಮಹಿಳೆಯನ್ನು ಗ್ರಾಮಸ್ಥರು ಸುತ್ತುವರಿದಿದ್ದು, ಆಕೆ ನೆಲದ ಮೇಲೆ ನರಳಾಡುತ್ತಿರುವುದನ್ನು ಕಾಣಬಹುದಾಗಿದೆ.

ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂಸೆಗೆ ಮುಂದಾಗಿದ್ದು, ಪರಿಸ್ಥಿತಿ ಭಯಾನಕ ತಿರುವು ಪಡೆಯುತ್ತದೆ; ಅವನು ಮಹಿಳೆಯನ್ನು ಕುತ್ತಿಗೆ ಹಿಡಿದು ಆಕೆಯನ್ನು ನೆಲಕ್ಕೆ ಬಲವಂತವಾಗಿ ತಳ್ಳಿ ಕಾಲಿನಿಂದ ತುಳಿದಿದ್ದಾನೆ. ಅವನನ್ನು ಇತರರು ದೂರ ತಳ್ಳುತ್ತಾರೆ ಮತ್ತು ಯುವತಿ ಎದ್ದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾಳೆ, ಎರಡನೆಯ ವ್ಯಕ್ತಿ ಮತ್ತೆ ನೆಲಕ್ಕೆ ತಳ್ಳಿದ್ದು, ಅವನು ಅವಳ ಸೀರೆಯನ್ನು ಹರಿದು ಹಾಕಲು ಪ್ರಯತ್ನಿಸಿದ್ದಾನೆ. ಕೆಲವು ಜನರು ಮರದ ಕೋಲಿನಿಂದ ಆಕೆಗೆ ಕೋಪೋದ್ರಿಕ್ತರಾಗಿ ಹೊಡೆದಿದ್ದಾರೆ.

ಮತ್ತೊಂದು ಆಘಾತಕಾರಿ ವಿಡಿಯೋದಲ್ಲಿ ಎರಡನೇ ಮಹಿಳೆಯು ಗುಲಾಬಿ ಸೀರೆಯುಟ್ಟ ಮಹಿಳೆಯ ಕೂದಲು ಹಿಡಿದು ನೆಲಕ್ಕೆ ಕುಸ್ತಿಯಾಡುತ್ತಾಳೆ ಮತ್ತು ಅವಳನ್ನು ಜೋರಾಗಿ ಒದ್ದು, ಪದೇಪದೆ ಹೊಡೆಯುತ್ತಾಳೆ.

ಇನ್ನೂ ಆಘಾತಕಾರಿ ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಾಯಕ್ವಾಡ್ ವೈಭವ್ ರಘುನಾಥ್ ಅವರು ಪ್ರತಿಕ್ರಿಯಿಸಿದ್ದು, ಈ ವೀಡಿಯೊಗಳು ಕನಿಷ್ಠ ಎರಡು ದಿನಗಳ ಮೊದಲು ಮಹಿಳೆಯ ಮೇಲೆ ಹಲ್ಲೆ ಮತ್ತು ಎರಡನೇ ಬಾರಿಗೆ ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಹೇಳಿದ್ದಾರೆ.

ಆರಂಭದಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯನ್ನು ನಂತರ ಉತ್ತಮ ಚಿಕಿತ್ಸೆಗಾಗಿ ರಾಜ್ಯ ರಾಜಧಾನಿ ಹೈದರಾಬಾದ್‌ನಲ್ಲಿರುವ ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಯಿತು.

ಹಲ್ಲೆಗೆ ಸಂಬಂಧಿಸಿದಂತೆ ಬಂಡಿ ವೆಂಕಟೇಶ್ ಮತ್ತು ಅವರ ಪತ್ನಿ, ಹಾಗೂ ಸಂತ್ರಸ್ತೆಯ ಸಹೋದರಿ ಮತ್ತು ಪತಿ ಎಂದು ಗುರುತಿಸಲಾಗಿರುವ ನಾಲ್ವರನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಮಹಿಳೆ ಬಂಡಿ ವೆಂಕಟೇಶ್ ಅವರಿಂದ ಸಾಲ ಪಡೆದ ಹಣಕ್ಕೆ ವಿವಾದ ಉಂಟಾಗಿದೆ.

ಪ್ರತಿಯಾಗಿ, ಆಕೆ ಹಣ ನೀಡಿದ ವೆಂಕಟೇಶ್ ಜಮೀನಿನಲ್ಲಿ ಕೆಲಸ ಮಾಡಬೇಕಾಗಿತ್ತು. ಆದರೆ, ಮಹಿಳೆ ತನ್ನ ಸಹೋದರಿಯೊಂದಿಗೆ ಜಗಳವಾಡಿದ ನಂತರ ಕೆಲವು ದಿನಗಳ ನಂತರ ಹೊರನಡೆದಳು. ಇದರಿಂದ ಕುಪಿತಗೊಂಡ ವೆಂಕಟೇಶ್ ಆಕೆಯನ್ನು ಹುಡುಕಿ ಕರೆತಂದು ತನ್ನ ಹೊಲಕ್ಕೆ ಎಳೆದೊಯ್ದಿದ್ದಾನೆ.

ಸೋಮವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಯನ್ನು ಭೇಟಿಯಾಗಿ ಕಾಂಗ್ರೆಸ್ ಸರ್ಕಾರ ಎಲ್ಲ ವಿಕಿತ್ಸಾ ವೆಚ್ಚ ಪಾವತಿಸಲಿದೆ ಎಂದು ಹೇಳಿದರು.

ಮಹಿಳೆಯು ಸ್ವಂತ ಮನೆಯನ್ನು ಹೊಂದಿಲ್ಲದಿದ್ದರೆ ರಾಜ್ಯ ಸರ್ಕಾರವು ನೀಡಲಿದೆ. ಅವರ ಮಕ್ಕಳಿಗೆ ಶಿಕ್ಷಣ ಮತ್ತು ಕೃಷಿ ಮಾಡಲು ಭೂಮಿಯನ್ನು ಒದಗಿಸುತ್ತದೆ ಎಂದು ವಿಕ್ರಮಾರ್ಕ ಹೇಳಿದರು. ಶನಿವಾರ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣರಾವ್ ಮಹಿಳೆಯೊಂದಿಗೆ ಮಾತನಾಡಿ ₹2 ಲಕ್ಷ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು.

ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಸೋಮವಾರ ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಆಕೆಯ ಸಹೋದರಿ ಸೇರಿದಂತೆ ಕೆಲವು ವ್ಯಕ್ತಿಗಳಿಂದ ಚಿತ್ರಹಿಂಸೆಗೊಳಗಾದ ಬುಡಕಟ್ಟು ಮಹಿಳೆಯನ್ನು ಭೇಟಿ ಮಾಡಿ, ಆಕೆಯ ವೈದ್ಯಕೀಯ ಚಿಕಿತ್ಸೆಯನ್ನು ಸರ್ಕಾರ ನೋಡಿಕೊಳ್ಳುತ್ತದೆ ಮತ್ತು ಇತರ ಸಹಾಯವನ್ನು ನೀಡಲಿದೆ ಎಂದು ಭರವಸೆ ನೀಡಿದರು.

27ರ ಹರೆಯದ ಮಹಿಳೆಯ ಮೇಲಿನ ದಾಳಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ವಿಕ್ರಮಾರ್ಕ, ಅವರು ಚೇತರಿಸಿಕೊಳ್ಳುವವರೆಗೆ ಸರ್ಕಾರವು ಅವಳ ಚಿಕಿತ್ಸೆಯನ್ನು ನೋಡಿಕೊಳ್ಳುತ್ತದೆ. ಇಂದಿರಮ್ಮ ಬಡವರ ವಸತಿಯಡಿಯಲ್ಲಿ ಅವರಿಗೆ ಸ್ವಂತ ಮನೆ, ಮಕ್ಕಳಿಗೆ ಸರ್ಕಾರಿ ಸಮಾಜ ಕಲ್ಯಾಣ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಗುವಳಿ ಮಾಡಲು ಭೂಮಿ ಇಲ್ಲದಿದ್ದರೆ ಸರ್ಕಾರವು ಅವರಿಗೆ ಮನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

ಆರೋಪಿಗಳನ್ನು ಈಗಾಗಲೇ ಜೈಲಿಗೆ ಕಳುಹಿಸಿರುವುದನ್ನು ಗಮನಿಸಿದ ಉಪಮುಖ್ಯಮಂತ್ರಿ ಅವರು, ಘಟನೆಯ ಸಂಪೂರ್ಣ ಮಾಹಿತಿ ಪಡೆದ ನಂತರ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಇದನ್ನೂ ಓದಿ; 4 ಹಂತದ ತನಿಖೆ, 1,000 ಫೋನ್ ಸಂಖ್ಯೆಗಳ ಪರಿಶೀಲನೆ; ಪೇಪರ್ ಸೋರಿಕೆ ಪ್ರಕರಣಗಳನ್ನು ಭೇದಿಸಲು ಸಿಬಿಐ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...