Homeಮುಖಪುಟತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು

- Advertisement -
- Advertisement -

ದುಬ್ಬಾಕ ಉಪ ಚುನಾವಣೆಯಲ್ಲಿ ಟಿಆರ್‌ಎಸ್ ಅಭ್ಯರ್ಥಿ ಎಸ್ ಸುಜಾತಾ ಸೋತಿದ್ದಕ್ಕೆ ಖಿನ್ನತೆಗೆ ಒಳಗಾದ ಪಕ್ಷದ 23 ವರ್ಷದ ಕಾರ್ಯಕರ್ತ ಮಂಗಳವಾರ ತಡರಾತ್ರಿ ಅಸಹಜವಾಗಿ ಸಾವನ್ನಪ್ಪಿದ್ದು, ದೌಲತಾಬಾದ್‌ನ ಕೊನೈಪಲ್ಲಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು. ಮಂಗಳವಾರ ಮತದಾನ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಕ್ಷಣದಿಂದ ಕೊಟ್ಟಿಂಟಿ ಸ್ವಾಮಿ ಟಿವಿಯನ್ನು ನೋಡುತ್ತಲೇ ಇದ್ದರು ಎಂದು ಅವರ ಪತ್ನಿ ಹೇಳಿದ್ದಾರೆ.

ಇದನ್ನೂ ಓದಿ: ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಟಿಆರ್‌ಎಸ್ ಅಭ್ಯರ್ಥಿ ಗೆಲ್ಲುತ್ತಾರೆಂದು ಕೊನೆಯ ಕ್ಷಣದವರೆಗೂ ಭರವಸೆ ಹೊಂದಿದ್ದರು. ಆದರೆ ಮಂಗಳವಾರ ಸಂಜೆ 5 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬಂದು ಬಿಜೆಪಿ ಅಭ್ಯರ್ಥಿ ಗೆದ್ದರು. ಇದರಿಂದ ಕೊಟ್ಟಿಂಟಿ ಸ್ವಾಮಿ ಖಿನ್ನತೆಗೆ ಒಳಗಾಗಿದ್ದರು.

ನಿರಾಶೆಗೊಂಡ ಕೊಟ್ಟಿಂಟಿ ಸ್ವಾಮಿ, “ಈಗ ಬದುಕಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿ, ತಮ್ಮ ಕೃಷಿಭೂಮಿಗೆ ಹೋಗುವುದಾಗಿ ಹೇಳಿ ಶೀಘ್ರದಲ್ಲೇ ಮನೆಯಿಂದ ಹೊರಟುಹೋದರು” ಎಂದು ಅವರ ಪತ್ನಿ ಹೇಳಿದರು.

ತುಂಬಾ ಸಮಯದ ನಂತರವೂ ಅವರು ಮನೆಗೆ ಹಿಂತಿರುಗಲಿಲ್ಲವಾದ್ದರಿಂದ, ಕಾರ್ಯಕರ್ತನ ಪತ್ನಿಯು ಗ್ರಾಮಸ್ಥರಿಗೆ ಮಾಹಿತಿ ನೀಡಿದಳು. ಆಗ ಅವರು ಕೊಟ್ಟಿಂಟಿ ಸ್ವಾಮಿಯ ಹೊಲಕ್ಕೆ ಹೋದರು. ಆದರೆ ಅಲ್ಲಿ ಆತ ನೇಣುಬಿಗಿದುಕೊಂಡಿದ್ದನು ಎಂದು ಹೇಳಿದರು. ಪ್ರತ್ಯಕ್ಷದರ್ಶಿಯ ಪ್ರಕಾರ, ಸಾಯುವಾಗ ತನ್ನ ಪಕ್ಷದ ಸ್ಕಾಫ್‌ ಅನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ತಲುಪಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಶವಪರೀಕ್ಷೆಯ ನಂತರ, ಮೃತ ದೇಹವನ್ನು ಬುಧವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಉಪಚುನಾವಣೆಯ ಪಕ್ಷದ ಉಸ್ತುವಾರಿ ಮತ್ತು ಹಣಕಾಸು ಸಚಿವ ಟಿ.ಹರೀಶ್ ರಾವ್‌ಗೆ ಈ ಘಟನೆಯ ಬಗ್ಗೆ ತಿಳಿದಾಗ ಆಘಾತಕ್ಕೊಳಗಾಗಿದ್ದಾರೆ. ಸಚಿವರು ಮತ್ತು ಮೇದಕ್ ಸಂಸದ ಕೆ ಪ್ರಭಾಕ ಬುಧವಾರ ಸಂತ್ರಸ್ತರ ಮನೆಗೆ ತಲುಪಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಮೃತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರೀಶ್, ಪಕ್ಷದ ಕಾರ್ಯಕರ್ತರಿಗೆ ಇಂತಹ ತೀವ್ರ ಕ್ರಮಗಳ ಮೋರೆ ಹೋಗದಂತೆ ವಿನಂತಿಸಿದರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...