Homeಮುಖಪುಟತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು

- Advertisement -
- Advertisement -

ದುಬ್ಬಾಕ ಉಪ ಚುನಾವಣೆಯಲ್ಲಿ ಟಿಆರ್‌ಎಸ್ ಅಭ್ಯರ್ಥಿ ಎಸ್ ಸುಜಾತಾ ಸೋತಿದ್ದಕ್ಕೆ ಖಿನ್ನತೆಗೆ ಒಳಗಾದ ಪಕ್ಷದ 23 ವರ್ಷದ ಕಾರ್ಯಕರ್ತ ಮಂಗಳವಾರ ತಡರಾತ್ರಿ ಅಸಹಜವಾಗಿ ಸಾವನ್ನಪ್ಪಿದ್ದು, ದೌಲತಾಬಾದ್‌ನ ಕೊನೈಪಲ್ಲಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು. ಮಂಗಳವಾರ ಮತದಾನ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಕ್ಷಣದಿಂದ ಕೊಟ್ಟಿಂಟಿ ಸ್ವಾಮಿ ಟಿವಿಯನ್ನು ನೋಡುತ್ತಲೇ ಇದ್ದರು ಎಂದು ಅವರ ಪತ್ನಿ ಹೇಳಿದ್ದಾರೆ.

ಇದನ್ನೂ ಓದಿ: ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಟಿಆರ್‌ಎಸ್ ಅಭ್ಯರ್ಥಿ ಗೆಲ್ಲುತ್ತಾರೆಂದು ಕೊನೆಯ ಕ್ಷಣದವರೆಗೂ ಭರವಸೆ ಹೊಂದಿದ್ದರು. ಆದರೆ ಮಂಗಳವಾರ ಸಂಜೆ 5 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬಂದು ಬಿಜೆಪಿ ಅಭ್ಯರ್ಥಿ ಗೆದ್ದರು. ಇದರಿಂದ ಕೊಟ್ಟಿಂಟಿ ಸ್ವಾಮಿ ಖಿನ್ನತೆಗೆ ಒಳಗಾಗಿದ್ದರು.

ನಿರಾಶೆಗೊಂಡ ಕೊಟ್ಟಿಂಟಿ ಸ್ವಾಮಿ, “ಈಗ ಬದುಕಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿ, ತಮ್ಮ ಕೃಷಿಭೂಮಿಗೆ ಹೋಗುವುದಾಗಿ ಹೇಳಿ ಶೀಘ್ರದಲ್ಲೇ ಮನೆಯಿಂದ ಹೊರಟುಹೋದರು” ಎಂದು ಅವರ ಪತ್ನಿ ಹೇಳಿದರು.

ತುಂಬಾ ಸಮಯದ ನಂತರವೂ ಅವರು ಮನೆಗೆ ಹಿಂತಿರುಗಲಿಲ್ಲವಾದ್ದರಿಂದ, ಕಾರ್ಯಕರ್ತನ ಪತ್ನಿಯು ಗ್ರಾಮಸ್ಥರಿಗೆ ಮಾಹಿತಿ ನೀಡಿದಳು. ಆಗ ಅವರು ಕೊಟ್ಟಿಂಟಿ ಸ್ವಾಮಿಯ ಹೊಲಕ್ಕೆ ಹೋದರು. ಆದರೆ ಅಲ್ಲಿ ಆತ ನೇಣುಬಿಗಿದುಕೊಂಡಿದ್ದನು ಎಂದು ಹೇಳಿದರು. ಪ್ರತ್ಯಕ್ಷದರ್ಶಿಯ ಪ್ರಕಾರ, ಸಾಯುವಾಗ ತನ್ನ ಪಕ್ಷದ ಸ್ಕಾಫ್‌ ಅನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ತಲುಪಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಶವಪರೀಕ್ಷೆಯ ನಂತರ, ಮೃತ ದೇಹವನ್ನು ಬುಧವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಉಪಚುನಾವಣೆಯ ಪಕ್ಷದ ಉಸ್ತುವಾರಿ ಮತ್ತು ಹಣಕಾಸು ಸಚಿವ ಟಿ.ಹರೀಶ್ ರಾವ್‌ಗೆ ಈ ಘಟನೆಯ ಬಗ್ಗೆ ತಿಳಿದಾಗ ಆಘಾತಕ್ಕೊಳಗಾಗಿದ್ದಾರೆ. ಸಚಿವರು ಮತ್ತು ಮೇದಕ್ ಸಂಸದ ಕೆ ಪ್ರಭಾಕ ಬುಧವಾರ ಸಂತ್ರಸ್ತರ ಮನೆಗೆ ತಲುಪಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಮೃತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರೀಶ್, ಪಕ್ಷದ ಕಾರ್ಯಕರ್ತರಿಗೆ ಇಂತಹ ತೀವ್ರ ಕ್ರಮಗಳ ಮೋರೆ ಹೋಗದಂತೆ ವಿನಂತಿಸಿದರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...