Homeಮುಖಪುಟತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ತೆಲಂಗಾಣ: ಉಪಚುನಾವಣೆಯಲ್ಲಿ ಟಿಆರ್‌ಎಸ್ ಸೋಲು- ಕಾರ್ಯಕರ್ತನ ಅಸಹಜ ಸಾವು!

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು

- Advertisement -
- Advertisement -

ದುಬ್ಬಾಕ ಉಪ ಚುನಾವಣೆಯಲ್ಲಿ ಟಿಆರ್‌ಎಸ್ ಅಭ್ಯರ್ಥಿ ಎಸ್ ಸುಜಾತಾ ಸೋತಿದ್ದಕ್ಕೆ ಖಿನ್ನತೆಗೆ ಒಳಗಾದ ಪಕ್ಷದ 23 ವರ್ಷದ ಕಾರ್ಯಕರ್ತ ಮಂಗಳವಾರ ತಡರಾತ್ರಿ ಅಸಹಜವಾಗಿ ಸಾವನ್ನಪ್ಪಿದ್ದು, ದೌಲತಾಬಾದ್‌ನ ಕೊನೈಪಲ್ಲಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಟ್ಟಿಂಟಿ ಸ್ವಾಮಿ ಟಿಆರ್‌ಎಸ್ ಪಕ್ಷದ ತೀವ್ರ ಬೆಂಬಲಿಗರಾಗಿದ್ದು, ಚುನಾವಣೆ ಘೋಷಣೆಯಾದ ಮೊದಲ ದಿನದಿಂದಲೇ ದುಬ್ಬಕಾ ಉಪಚುನಾವಣೆ ಅಭಿಯಾನದ ಭಾಗವಾಗಿದ್ದರು. ಮಂಗಳವಾರ ಮತದಾನ ಎಣಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಕ್ಷಣದಿಂದ ಕೊಟ್ಟಿಂಟಿ ಸ್ವಾಮಿ ಟಿವಿಯನ್ನು ನೋಡುತ್ತಲೇ ಇದ್ದರು ಎಂದು ಅವರ ಪತ್ನಿ ಹೇಳಿದ್ದಾರೆ.

ಇದನ್ನೂ ಓದಿ: ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಟಿಆರ್‌ಎಸ್ ಅಭ್ಯರ್ಥಿ ಗೆಲ್ಲುತ್ತಾರೆಂದು ಕೊನೆಯ ಕ್ಷಣದವರೆಗೂ ಭರವಸೆ ಹೊಂದಿದ್ದರು. ಆದರೆ ಮಂಗಳವಾರ ಸಂಜೆ 5 ಗಂಟೆಯ ಹೊತ್ತಿಗೆ ಫಲಿತಾಂಶ ಹೊರಬಂದು ಬಿಜೆಪಿ ಅಭ್ಯರ್ಥಿ ಗೆದ್ದರು. ಇದರಿಂದ ಕೊಟ್ಟಿಂಟಿ ಸ್ವಾಮಿ ಖಿನ್ನತೆಗೆ ಒಳಗಾಗಿದ್ದರು.

ನಿರಾಶೆಗೊಂಡ ಕೊಟ್ಟಿಂಟಿ ಸ್ವಾಮಿ, “ಈಗ ಬದುಕಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿ, ತಮ್ಮ ಕೃಷಿಭೂಮಿಗೆ ಹೋಗುವುದಾಗಿ ಹೇಳಿ ಶೀಘ್ರದಲ್ಲೇ ಮನೆಯಿಂದ ಹೊರಟುಹೋದರು” ಎಂದು ಅವರ ಪತ್ನಿ ಹೇಳಿದರು.

ತುಂಬಾ ಸಮಯದ ನಂತರವೂ ಅವರು ಮನೆಗೆ ಹಿಂತಿರುಗಲಿಲ್ಲವಾದ್ದರಿಂದ, ಕಾರ್ಯಕರ್ತನ ಪತ್ನಿಯು ಗ್ರಾಮಸ್ಥರಿಗೆ ಮಾಹಿತಿ ನೀಡಿದಳು. ಆಗ ಅವರು ಕೊಟ್ಟಿಂಟಿ ಸ್ವಾಮಿಯ ಹೊಲಕ್ಕೆ ಹೋದರು. ಆದರೆ ಅಲ್ಲಿ ಆತ ನೇಣುಬಿಗಿದುಕೊಂಡಿದ್ದನು ಎಂದು ಹೇಳಿದರು. ಪ್ರತ್ಯಕ್ಷದರ್ಶಿಯ ಪ್ರಕಾರ, ಸಾಯುವಾಗ ತನ್ನ ಪಕ್ಷದ ಸ್ಕಾಫ್‌ ಅನ್ನು ಕುತ್ತಿಗೆಗೆ ಸುತ್ತಿಕೊಂಡಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅವರು ಸ್ಥಳಕ್ಕೆ ತಲುಪಿ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಶವಪರೀಕ್ಷೆಯ ನಂತರ, ಮೃತ ದೇಹವನ್ನು ಬುಧವಾರ ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಉಪಚುನಾವಣೆಯ ಪಕ್ಷದ ಉಸ್ತುವಾರಿ ಮತ್ತು ಹಣಕಾಸು ಸಚಿವ ಟಿ.ಹರೀಶ್ ರಾವ್‌ಗೆ ಈ ಘಟನೆಯ ಬಗ್ಗೆ ತಿಳಿದಾಗ ಆಘಾತಕ್ಕೊಳಗಾಗಿದ್ದಾರೆ. ಸಚಿವರು ಮತ್ತು ಮೇದಕ್ ಸಂಸದ ಕೆ ಪ್ರಭಾಕ ಬುಧವಾರ ಸಂತ್ರಸ್ತರ ಮನೆಗೆ ತಲುಪಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ನಂತರ ಮೃತನ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಹರೀಶ್, ಪಕ್ಷದ ಕಾರ್ಯಕರ್ತರಿಗೆ ಇಂತಹ ತೀವ್ರ ಕ್ರಮಗಳ ಮೋರೆ ಹೋಗದಂತೆ ವಿನಂತಿಸಿದರು

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...