Homeಮುಖಪುಟತೆಲಂಗಾಣದಲ್ಲಿ ಸಾರಿಗೆ ನೌಕರರ ಮುಷ್ಕರ : ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರ ಪರದಾಟ..

ತೆಲಂಗಾಣದಲ್ಲಿ ಸಾರಿಗೆ ನೌಕರರ ಮುಷ್ಕರ : ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರ ಪರದಾಟ..

- Advertisement -
- Advertisement -

ವೇತನ ಪರಿಷ್ಕರಣೆ, ಸೇವಾಭದ್ರತೆ, ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ
ಟಿ.ಎಸ್ಆರ್‌ಟಿಸಿ ನೌಕರರು ಅನಿರ್ದಿಷ್ಟವಧಿ ಮುಷ್ಕರ ಮುಂದುವರಿಸಿದ್ದಾರೆ. ಇದರ ಬಿಸಿ ರಾಜ್ಯದ ಪ್ರಯಾಣಿಕರಿಗೂ ತಟ್ಟಿದ್ದು ದಸರಾ ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರು ಪ್ರಯಾಸಪಟ್ಟಿದ್ದಾರೆ.

ಶುಕ್ರವಾರ ಮಧ್ಯರಾತ್ರಿಯಿಂದ ಮುಷ್ಕರ ನಡೆಸುತ್ತಿರುವ ಟಿ.ಎಸ್.ಆರ್.ಟಿ.ಸಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಸಾರಿಗೆ ನಿಗಮ ಬಸ್‌ಗಳ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ದಸರ ಹಬ್ಬ ಮತ್ತು ಬತುಕಮ್ಮ ಹಬ್ಬಕ್ಕೆ ಊರುಗಳಿಗೆ ತೆರಳಲು ಪ್ರಯಾಣಿಕರು ಪರದಾಡುವಂತಾಗಿದೆ.

ರಾಜ್ಯದ ಎಲ್ಲಾ ಟಿ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬಸ್ ಗಳಿಗಾಗಿ ಕಾದು ಕುಳಿತಿದ್ದಾರೆ. ಸುಮಾರು 10 ಸಾವಿರ ಬಸ್ ಗಳನ್ನು ಡಿಪೋದಲ್ಲಿ ನಿಲ್ಲಿಸಲಾಗಿದ್ದು 50 ಸಾವಿರಕ್ಕೂ ಹೆಚ್ಚು ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಎರಡು ದಿನಗಳಿಂದ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ವಾಹನಗಳು ಸೇರಿದಂತೆ 1200 ವಾಹನಗಳನ್ನು ಬಾಡಿಗೆ ಪಡೆದು ಪ್ರಯಾಣಿಕರನ್ನು ಅವರ ಗ್ರಾಮಗಳಿಗೆ ಬಿಡುವ ವ್ಯವಸ್ಥೆ ಮಾಡಿದೆ. ತಾತ್ಕಾಲಿಕವಾಗಿ ಚಾಲಕರು ಮತ್ತು ಇತರೆ ಕಾರ್ಮಿಕರನ್ನು ತೆಗೆದುಕೊಂಡು ಪ್ರಯಾಣಿಕರ ನೆರವಿಗೆ ಬರಲಾಗಿದೆ.

ಮೂರು ದಿನಗಳಿಂದ ಮುಷ್ಕರ ನಡೆಸುತ್ತಿರುವ ಟಿ.ಎಸ್.ಆರ್.ಟಿ.ಸಿ ನೌಕರರು ಕೂಡಲೇ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದೆ. ಅಕ್ಟೋಬರ್ 7 ರಂದು ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಹಾಜರಾಗದಿದ್ದರೆ ಎಸ್ಮಾ ಜಾರಿಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ಮಾಧ್ಯಮಗಳ ಜೊತೆ ಮಾತನಾಡಿರುವ ಜಂಟಿ ಕ್ರಿಯಾ ಸಮಿತಿ ಮುಖಂಡರು ಸರ್ಕಾರ ನಮ್ಮ ಮೇಲೆ ಎಸ್ಮಾ ಅಸ್ತ್ರ ಪ್ರಯೋಗಿಸಿ ಸೇವೆಯಿಂದ ವಜಾಗೊಳಿಸಿದರೂ ಮುಷ್ಕರ ಕೈಬಿಡುವುದಿಲ್ಲ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಚುನಾವಣೆ ಸಮಯದಲ್ಲಿ ನೀಡಿರುವ ಭರವಸೆ ಎ.ಪಿ.ಎಸ್.ಆರ್.ಟಿ.ಸಿ ನಿಗಮವನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವ ಕ್ರಮದಂತೆ ತೆಲಂಗಾಣ ಸರ್ಕಾರವೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾರಿಗೆ ರಸ್ತೆ ನಿಗಮದಲ್ಲಿ ಒಂದು ಲಕ್ಷ ಮಂದಿ ಚಾಲಕರು, ನಿರ್ವಾಹಕರು ಮತ್ತು ಇತರರು ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದು ಅವರಿಗೆ ಯಾವುದೇ ಭದ್ರತೆ ಇಲ್ಲವಾಗಿದೆ. ಹಾಗಾಗಿ ಸೇವಾ ಭದ್ರತೆ ಒದಗಿಸಬೇಕು ಎಂದು ಮುಷ್ಕರ ನಿರತ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...