Homeಮುಖಪುಟತೆಲಂಗಾಣದಲ್ಲಿ ಸಾರಿಗೆ ನೌಕರರ ಮುಷ್ಕರ : ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರ ಪರದಾಟ..

ತೆಲಂಗಾಣದಲ್ಲಿ ಸಾರಿಗೆ ನೌಕರರ ಮುಷ್ಕರ : ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರ ಪರದಾಟ..

- Advertisement -
- Advertisement -

ವೇತನ ಪರಿಷ್ಕರಣೆ, ಸೇವಾಭದ್ರತೆ, ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ
ಟಿ.ಎಸ್ಆರ್‌ಟಿಸಿ ನೌಕರರು ಅನಿರ್ದಿಷ್ಟವಧಿ ಮುಷ್ಕರ ಮುಂದುವರಿಸಿದ್ದಾರೆ. ಇದರ ಬಿಸಿ ರಾಜ್ಯದ ಪ್ರಯಾಣಿಕರಿಗೂ ತಟ್ಟಿದ್ದು ದಸರಾ ಹಬ್ಬಕ್ಕೆ ಊರಿಗೆ ತರಳಲು ಪ್ರಯಾಣಿಕರು ಪ್ರಯಾಸಪಟ್ಟಿದ್ದಾರೆ.

ಶುಕ್ರವಾರ ಮಧ್ಯರಾತ್ರಿಯಿಂದ ಮುಷ್ಕರ ನಡೆಸುತ್ತಿರುವ ಟಿ.ಎಸ್.ಆರ್.ಟಿ.ಸಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಾದ್ಯಂತ ಸಾರಿಗೆ ನಿಗಮ ಬಸ್‌ಗಳ ಸೇವೆ ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ದಸರ ಹಬ್ಬ ಮತ್ತು ಬತುಕಮ್ಮ ಹಬ್ಬಕ್ಕೆ ಊರುಗಳಿಗೆ ತೆರಳಲು ಪ್ರಯಾಣಿಕರು ಪರದಾಡುವಂತಾಗಿದೆ.

ರಾಜ್ಯದ ಎಲ್ಲಾ ಟಿ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರು ಬಸ್ ಗಳಿಗಾಗಿ ಕಾದು ಕುಳಿತಿದ್ದಾರೆ. ಸುಮಾರು 10 ಸಾವಿರ ಬಸ್ ಗಳನ್ನು ಡಿಪೋದಲ್ಲಿ ನಿಲ್ಲಿಸಲಾಗಿದ್ದು 50 ಸಾವಿರಕ್ಕೂ ಹೆಚ್ಚು ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಎರಡು ದಿನಗಳಿಂದ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ವಾಹನಗಳು ಸೇರಿದಂತೆ 1200 ವಾಹನಗಳನ್ನು ಬಾಡಿಗೆ ಪಡೆದು ಪ್ರಯಾಣಿಕರನ್ನು ಅವರ ಗ್ರಾಮಗಳಿಗೆ ಬಿಡುವ ವ್ಯವಸ್ಥೆ ಮಾಡಿದೆ. ತಾತ್ಕಾಲಿಕವಾಗಿ ಚಾಲಕರು ಮತ್ತು ಇತರೆ ಕಾರ್ಮಿಕರನ್ನು ತೆಗೆದುಕೊಂಡು ಪ್ರಯಾಣಿಕರ ನೆರವಿಗೆ ಬರಲಾಗಿದೆ.

ಮೂರು ದಿನಗಳಿಂದ ಮುಷ್ಕರ ನಡೆಸುತ್ತಿರುವ ಟಿ.ಎಸ್.ಆರ್.ಟಿ.ಸಿ ನೌಕರರು ಕೂಡಲೇ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ ಮಾಡಿದೆ. ಅಕ್ಟೋಬರ್ 7 ರಂದು ಮುಷ್ಕರ ನಿಲ್ಲಿಸಿ ಕೆಲಸಕ್ಕೆ ಹಾಜರಾಗದಿದ್ದರೆ ಎಸ್ಮಾ ಜಾರಿಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಮಧ್ಯೆ ಮಾಧ್ಯಮಗಳ ಜೊತೆ ಮಾತನಾಡಿರುವ ಜಂಟಿ ಕ್ರಿಯಾ ಸಮಿತಿ ಮುಖಂಡರು ಸರ್ಕಾರ ನಮ್ಮ ಮೇಲೆ ಎಸ್ಮಾ ಅಸ್ತ್ರ ಪ್ರಯೋಗಿಸಿ ಸೇವೆಯಿಂದ ವಜಾಗೊಳಿಸಿದರೂ ಮುಷ್ಕರ ಕೈಬಿಡುವುದಿಲ್ಲ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಚುನಾವಣೆ ಸಮಯದಲ್ಲಿ ನೀಡಿರುವ ಭರವಸೆ ಎ.ಪಿ.ಎಸ್.ಆರ್.ಟಿ.ಸಿ ನಿಗಮವನ್ನು ಸರ್ಕಾರದೊಂದಿಗೆ ವಿಲೀನಗೊಳಿಸುವ ಕ್ರಮದಂತೆ ತೆಲಂಗಾಣ ಸರ್ಕಾರವೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾರಿಗೆ ರಸ್ತೆ ನಿಗಮದಲ್ಲಿ ಒಂದು ಲಕ್ಷ ಮಂದಿ ಚಾಲಕರು, ನಿರ್ವಾಹಕರು ಮತ್ತು ಇತರರು ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದು ಅವರಿಗೆ ಯಾವುದೇ ಭದ್ರತೆ ಇಲ್ಲವಾಗಿದೆ. ಹಾಗಾಗಿ ಸೇವಾ ಭದ್ರತೆ ಒದಗಿಸಬೇಕು ಎಂದು ಮುಷ್ಕರ ನಿರತ ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...