Homeಮುಖಪುಟತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

ತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

- Advertisement -
- Advertisement -

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸುರಂಗದ ಮೇಲ್ಛಾವಣಿ ಕುಸಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದು, ಎಂಟು ಕಾರ್ಮಿಕರು ಇನ್ನೂ ಅದರೊಳಗೆ ಸಿಲುಕಿಕೊಂಡಿದ್ದಾರೆ.

ಸೇನೆಯು ತನ್ನ ಎಂಜಿನಿಯರ್ ಟಾಸ್ಕ್ ಫೋರ್ಸ್ (ಇಟಿಎಫ್) ಅನ್ನು ರಕ್ಷಣಾ ಕಾರ್ಯಾಚರಣೆಗಾಗಿ ತ್ವರಿತವಾಗಿ ಸಜ್ಜುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಸಜ್ಜುಗೊಂಡಿರುವ ಇಟಿಎಫ್ ಅಪಘಾತ ಸ್ಥಳದಲ್ಲಿ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

200 ಮೀಟರ್‌ಗಳಷ್ಟು ಅವಶೇಷಗಳಿಂದ ತುಂಬಿದ ಪ್ಯಾಚ್ ಇದೆ ಎಂದು ರಕ್ಷಣಾ ಪಡೆ ತಿಳಿಸಿದೆ. ಈ ಅವಶೇಷಗಳನ್ನು ಸ್ವಚ್ಛಗೊಳಿಸುವವರೆಗೆ, ಸಿಲುಕಿರುವ ಕಾರ್ಮಿಕರ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಹಾಗೂ ಅವರನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ.

“ಸುರಂಗದ 11-13 ಕಿಮೀ ನಡುವಿನ ಪ್ಯಾಚ್‌ನಲ್ಲಿ ನೀರು ತುಂಬಿರುತ್ತದೆ, ನೀರನ್ನು ತೆಗೆದುಹಾಕುವವರೆಗೆ, ಅವಶೇಷಗಳ ಶುಚಿಗೊಳಿಸುವ ಕೆಲಸ ಪ್ರಾರಂಭವಾಗುವುದಿಲ್ಲ” ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡರ್ ಸುಖೇಂದು ಹೇಳಿದರು.

ಶ್ರೀಶೈಲಂನಿಂದ ದೇವರಕೊಂಡ ಕಡೆಗೆ ಸಾಗುವ ಶ್ರೀಶೈಲಂ ಎಡದಂಡೆ ಕಾಲುವೆಯ 14 ಕಿ.ಮೀ ಒಳಹರಿವಿನಲ್ಲಿ ಸೋರಿಕೆಯನ್ನು ಮುಚ್ಚಲು ಬಳಸಲಾಗಿದ್ದ ಕಾಂಕ್ರೀಟ್ ಭಾಗದ ಕುಸಿತದಿಂದ ಈ ಅವಘಡ ಸಂಭವಿಸಿದೆ.

ನಾಗರ್ಕರ್ನೂಲ್‌ನಲ್ಲಿ ಅಪಘಾತ ನಡೆದ ಸ್ಥಳದಲ್ಲಿದ್ದ ತೆಲಂಗಾಣ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಕಳೆದ ವರ್ಷ ಉತ್ತರಾಖಂಡದಲ್ಲಿ ಇದೇ ರೀತಿಯ ಘಟನೆ ನಡೆದಾಗ ರಕ್ಷಣಾ ಕಾರ್ಯಾಚರಣೆ ನಡೆಸಿದವರು ಸೇರಿದಂತೆ ರಾಜ್ಯ ಸರ್ಕಾರ ತಜ್ಞರನ್ನು ಕರೆಸಿಕೊಂಡಿದೆ ಎಂದು ಹೇಳಿದರು.

ಸಿಲುಕಿರುವ ಎಂಟು ಜನರಲ್ಲಿ ಮೂಲಸೌಕರ್ಯದ ಇಬ್ಬರು ಎಂಜಿನಿಯರ್‌ಗಳು, ಅಮೇರಿಕನ್ ಕಂಪನಿಯ ಇಬ್ಬರು ನಿರ್ವಾಹಕರು ಸೇರಿದ್ದಾರೆ. ಉಳಿದ ನಾಲ್ವರು ಕಾರ್ಮಿಕರು ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮೂಲದವರು.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ಘಟನೆ ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಿದರು. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಮರಳಿ ತರಲು ಕೇಂದ್ರದಿಂದ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಪ್ರಧಾನಿ ಮೋದಿ ಭರವಸೆ ನೀಡಿದರು.

ಶನಿವಾರ ಬೆಳಿಗ್ಗೆ, ಸುರಂಗದ ನಿರ್ಮಾಣ ಕಾರ್ಯ ಇತ್ತೀಚೆಗೆ ಪುನರಾರಂಭವಾದ ನಂತರ ಸುಮಾರು 50 ಜನರು 200 ಮೀಟರ್ ಉದ್ದದ ಬೋರಿಂಗ್ ಯಂತ್ರದೊಂದಿಗೆ ಸುರಂಗವನ್ನು ಪ್ರವೇಶಿಸಿದರು. ಸುರಂಗದೊಳಗೆ ಕಾರ್ಮಿಕರು 14 ಕಿಲೋಮೀಟರ್ ಒಳಗೆ ಸಿಲುಕಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಮಣ್ಣು ಸಂಗ್ರಹವಾಗಿರುವುದರಿಂದ ರಕ್ಷಣಾ ತಂಡಗಳು ಡ್ರೋನ್‌ಗಳನ್ನು ಬಳಸಿಕೊಂಡು ಮುಂದೆ ಸಾಗುತ್ತಿವೆ, ಸುರಂಗದಲ್ಲಿ ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತಿವೆ.

ಕಲ್ಲಿದ್ದಲು ಗಣಿಗಾರಿಕಾ ಘಟಕದ 19 ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ತೆರಳಿದೆ ಎಂದು ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲೀರೀಸ್ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್ ಬಲರಾಮ್ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬೆಳಿಗ್ಗೆ ಎಸ್‌ಎಲ್‌ಬಿಸಿ ಸುರಂಗದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಕುರಿತು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಮಾತನಾಡಿದರು. ತೆಗೆದುಕೊಂಡ ಕ್ರಮಗಳು ಮತ್ತು ನಿರಂತರ ಜಾಗರೂಕತೆ, ಮೇಲ್ವಿಚಾರಣೆಯನ್ನು ಶ್ಲಾಘಿಸಿದರು; ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಯಾವುದೇ ಅವಕಾಶವನ್ನು ಬಿಡದಂತೆ ಸರ್ಕಾರಕ್ಕೆ ಮವಿ ಮಾಡಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...