Homeಮುಖಪುಟತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

ತೆಲಂಗಾಣ ಸುರಂಗ ಕುಸಿತ; 200 ಮೀಟರ್ ಅವಶೇಷಗಳ ಹಿಂದೆ ಸಿಲುಕಿರುವ 8 ಜನರು

- Advertisement -
- Advertisement -

ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶನಿವಾರ ಸುರಂಗದ ಮೇಲ್ಛಾವಣಿ ಕುಸಿದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ಸೇರಿಕೊಂಡಿದ್ದು, ಎಂಟು ಕಾರ್ಮಿಕರು ಇನ್ನೂ ಅದರೊಳಗೆ ಸಿಲುಕಿಕೊಂಡಿದ್ದಾರೆ.

ಸೇನೆಯು ತನ್ನ ಎಂಜಿನಿಯರ್ ಟಾಸ್ಕ್ ಫೋರ್ಸ್ (ಇಟಿಎಫ್) ಅನ್ನು ರಕ್ಷಣಾ ಕಾರ್ಯಾಚರಣೆಗಾಗಿ ತ್ವರಿತವಾಗಿ ಸಜ್ಜುಗೊಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಸಜ್ಜುಗೊಂಡಿರುವ ಇಟಿಎಫ್ ಅಪಘಾತ ಸ್ಥಳದಲ್ಲಿ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (ಎಚ್‌ಎಡಿಆರ್) ಕಾರ್ಯಾಚರಣೆಗಳನ್ನು ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

200 ಮೀಟರ್‌ಗಳಷ್ಟು ಅವಶೇಷಗಳಿಂದ ತುಂಬಿದ ಪ್ಯಾಚ್ ಇದೆ ಎಂದು ರಕ್ಷಣಾ ಪಡೆ ತಿಳಿಸಿದೆ. ಈ ಅವಶೇಷಗಳನ್ನು ಸ್ವಚ್ಛಗೊಳಿಸುವವರೆಗೆ, ಸಿಲುಕಿರುವ ಕಾರ್ಮಿಕರ ನಿಖರವಾದ ಸ್ಥಳವನ್ನು ಕಂಡುಹಿಡಿಯಲು ಹಾಗೂ ಅವರನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ.

“ಸುರಂಗದ 11-13 ಕಿಮೀ ನಡುವಿನ ಪ್ಯಾಚ್‌ನಲ್ಲಿ ನೀರು ತುಂಬಿರುತ್ತದೆ, ನೀರನ್ನು ತೆಗೆದುಹಾಕುವವರೆಗೆ, ಅವಶೇಷಗಳ ಶುಚಿಗೊಳಿಸುವ ಕೆಲಸ ಪ್ರಾರಂಭವಾಗುವುದಿಲ್ಲ” ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡರ್ ಸುಖೇಂದು ಹೇಳಿದರು.

ಶ್ರೀಶೈಲಂನಿಂದ ದೇವರಕೊಂಡ ಕಡೆಗೆ ಸಾಗುವ ಶ್ರೀಶೈಲಂ ಎಡದಂಡೆ ಕಾಲುವೆಯ 14 ಕಿ.ಮೀ ಒಳಹರಿವಿನಲ್ಲಿ ಸೋರಿಕೆಯನ್ನು ಮುಚ್ಚಲು ಬಳಸಲಾಗಿದ್ದ ಕಾಂಕ್ರೀಟ್ ಭಾಗದ ಕುಸಿತದಿಂದ ಈ ಅವಘಡ ಸಂಭವಿಸಿದೆ.

ನಾಗರ್ಕರ್ನೂಲ್‌ನಲ್ಲಿ ಅಪಘಾತ ನಡೆದ ಸ್ಥಳದಲ್ಲಿದ್ದ ತೆಲಂಗಾಣ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಮಾತನಾಡಿ, ಕಳೆದ ವರ್ಷ ಉತ್ತರಾಖಂಡದಲ್ಲಿ ಇದೇ ರೀತಿಯ ಘಟನೆ ನಡೆದಾಗ ರಕ್ಷಣಾ ಕಾರ್ಯಾಚರಣೆ ನಡೆಸಿದವರು ಸೇರಿದಂತೆ ರಾಜ್ಯ ಸರ್ಕಾರ ತಜ್ಞರನ್ನು ಕರೆಸಿಕೊಂಡಿದೆ ಎಂದು ಹೇಳಿದರು.

ಸಿಲುಕಿರುವ ಎಂಟು ಜನರಲ್ಲಿ ಮೂಲಸೌಕರ್ಯದ ಇಬ್ಬರು ಎಂಜಿನಿಯರ್‌ಗಳು, ಅಮೇರಿಕನ್ ಕಂಪನಿಯ ಇಬ್ಬರು ನಿರ್ವಾಹಕರು ಸೇರಿದ್ದಾರೆ. ಉಳಿದ ನಾಲ್ವರು ಕಾರ್ಮಿಕರು ಉತ್ತರ ಪ್ರದೇಶ, ಜಾರ್ಖಂಡ್, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಮೂಲದವರು.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ಘಟನೆ ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಿದರು. ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಮತ್ತು ಸಿಕ್ಕಿಬಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಮರಳಿ ತರಲು ಕೇಂದ್ರದಿಂದ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಪ್ರಧಾನಿ ಮೋದಿ ಭರವಸೆ ನೀಡಿದರು.

ಶನಿವಾರ ಬೆಳಿಗ್ಗೆ, ಸುರಂಗದ ನಿರ್ಮಾಣ ಕಾರ್ಯ ಇತ್ತೀಚೆಗೆ ಪುನರಾರಂಭವಾದ ನಂತರ ಸುಮಾರು 50 ಜನರು 200 ಮೀಟರ್ ಉದ್ದದ ಬೋರಿಂಗ್ ಯಂತ್ರದೊಂದಿಗೆ ಸುರಂಗವನ್ನು ಪ್ರವೇಶಿಸಿದರು. ಸುರಂಗದೊಳಗೆ ಕಾರ್ಮಿಕರು 14 ಕಿಲೋಮೀಟರ್ ಒಳಗೆ ಸಿಲುಕಿಕೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ದೊಡ್ಡ ಪ್ರಮಾಣದ ಮಣ್ಣು ಸಂಗ್ರಹವಾಗಿರುವುದರಿಂದ ರಕ್ಷಣಾ ತಂಡಗಳು ಡ್ರೋನ್‌ಗಳನ್ನು ಬಳಸಿಕೊಂಡು ಮುಂದೆ ಸಾಗುತ್ತಿವೆ, ಸುರಂಗದಲ್ಲಿ ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತಿವೆ.

ಕಲ್ಲಿದ್ದಲು ಗಣಿಗಾರಿಕಾ ಘಟಕದ 19 ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲು ಸ್ಥಳಕ್ಕೆ ತೆರಳಿದೆ ಎಂದು ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲೀರೀಸ್ ಕಂಪನಿ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್ ಬಲರಾಮ್ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಬೆಳಿಗ್ಗೆ ಎಸ್‌ಎಲ್‌ಬಿಸಿ ಸುರಂಗದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳ ಕುರಿತು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಕರೆ ಮಾಡಿ ಮಾತನಾಡಿದರು. ತೆಗೆದುಕೊಂಡ ಕ್ರಮಗಳು ಮತ್ತು ನಿರಂತರ ಜಾಗರೂಕತೆ, ಮೇಲ್ವಿಚಾರಣೆಯನ್ನು ಶ್ಲಾಘಿಸಿದರು; ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಯಾವುದೇ ಅವಕಾಶವನ್ನು ಬಿಡದಂತೆ ಸರ್ಕಾರಕ್ಕೆ ಮವಿ ಮಾಡಿದ್ದಾರೆ.

ಇದನ್ನೂ ಓದಿ; ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡುವುದನ್ನು ವಿರೋಧಿಸಿ ಹಿಂದುತ್ವ ಸಂಘಟನೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...